ಸಂಗ್ರಹ ಚಿತ್ರ 
ರಾಜ್ಯ

ಆದಾಯ ತೆರಿಗೆ ದಾಳಿ: ಅಧಿಕಾರಿ ಬೆನ್ನಿಗೆ ನಿಂತ ಇಲಾಖೆ, ಬಾಲಕೃಷ್ಣ ವರ್ಗಾವಣೆಗೆ 'ಕೈ' ಆಗ್ರಹ

ಬಿಜೆಪಿ ಪರವಾಗಿ ಕಾಂಗ್ರೆಸ್ ಮುಖಂಡರ ಮೇಲೆ ಆದಾಯ ತೆರಿಗೆ ದಾಳಿ ನಡೆಸುತ್ತಿದ್ದಾರೆ ಎಂಬ ಆರೋಪ ಹೊತ್ತ ಐಟಿ ಅಧಿಕಾರಿ ಬಾಲಕೃಷ್ಣ ಬಿಆರ್ ಅವರ ಬೆಂಬಲಕ್ಕೆ ಆದಾಯ ತೆರಿಗೆ ಇಲಾಖೆ ನಿಂತಿದ್ದು, ಕಾಂಗ್ರೆಸ್ ಮುಖಂಡರ ಮನವಿಯನ್ನು ಉನ್ನತ ಅಧಿಕಾರಿಗಳಿಗೆ ರವಾನೆ ಮಾಡಲಾಗಿದೆ ಎಂದು ಹೇಳಿದೆ.

ಬೆಂಗಳೂರು: ಬಿಜೆಪಿ ಪರವಾಗಿ ಕಾಂಗ್ರೆಸ್ ಮುಖಂಡರ ಮೇಲೆ ಆದಾಯ ತೆರಿಗೆ ದಾಳಿ ನಡೆಸುತ್ತಿದ್ದಾರೆ ಎಂಬ ಆರೋಪ ಹೊತ್ತ ಐಟಿ ಅಧಿಕಾರಿ ಬಾಲಕೃಷ್ಣ ಬಿಆರ್ ಅವರ ಬೆಂಬಲಕ್ಕೆ ಆದಾಯ ತೆರಿಗೆ ಇಲಾಖೆ ನಿಂತಿದ್ದು, ಕಾಂಗ್ರೆಸ್ ಮುಖಂಡರ ಮನವಿಯನ್ನು ಉನ್ನತ ಅಧಿಕಾರಿಗಳಿಗೆ ರವಾನೆ ಮಾಡಲಾಗಿದೆ ಎಂದು ಹೇಳಿದೆ.
ಈ ಬಗ್ಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆದಾಯ ತೆರಿಗೆಯ ಇಲಾಖೆ ಪ್ರಧಾನ ಆಯುಕ್ತ ರಜನೀಶ್ ಕುಮಾರ್ ಅವರು, ಕಾಂಗ್ರೆಸ್ ಮುಖಂಡ ಮನವಿಯನ್ನು ಉನ್ನತ ಅಧಿಕಾರಿಗಳಿಗೆ ರವಾನೆ ಮಾಡಲಾಗಿದೆ ಎಂದು ಹೇಳಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡರ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆರೋಪ ಮಾಡುವವರ ಬಾಯಿ ಮುಚ್ಚಿಸಲು ಇಲಾಖೆ ಮುಂದಾಗುವುದಿಲ್ಲ. ಆದರೆ ಹಾಲಿ ನಡೆಯುತ್ತಿರುವ ಐಟಿ ದಾಳಿಯಲ್ಲಿ ಅವರಿಗೆ ಪಕ್ಷಪಾತ ಅಥವಾ ಒಂದು ಪಕ್ಷದ ಪರವಾಗಿ ನಡೆಯುತ್ತಿದೆ ಎಂದು ಅನಿಸಿದರೆ, ಉನ್ನತ ಅಧಿಕಾರಿಗಳಿಗೆ ದೂರು ನೀಡಬಹುದು. ಐಟಿ ಆಧಿಕಾರಿ ಬಾಲಕೃಷ್ಣ ಬಿಆರ್ ಅವರು ತಮ್ಮ ಕರ್ತವ್ಯ ನಿಭಾಯಿಸಿದ್ದು, ಇದರಲ್ಲಿ ಯಾವುದೇ ರೀತಿಯ ಷಡ್ಯಂತ್ರ ಕಂಡುಬಂದಿದೆ ಎಂದು ಯಾರಿಗಾದರೂ ಅನಿಸಿದರೆ ಕೋರ್ಟ್ ಮೆಟ್ಟಿಲೇರಬಹುದು. ಕೋರ್ಟ್ ನಲ್ಲಿ ರಿಟ್ ಅರ್ಜಿ ದಾಖಲಿಸುವ ಮೂಲಕ ದಾಳಿಯನ್ನು ಪ್ರಶ್ನಿಸಬಹುದು ಎಂದು ರಜನೀಶ್ ಕುಮಾರ್ ಹೇಳಿದರು.
ಐಟಿ ಆಧಿಕಾರಿ ವಿರುದ್ಧ ಕೈ ಮುಖಂಡರ ಪ್ರತಿಭಟನೆ, ವರ್ಗಾವಣೆಗೆ ಆಗ್ರಹ
ಇನ್ನು ಐಟಿ ಇಲಾಖೆಯನ್ನು ಅಧಿಕಾರಿ ಬಿಆರ್ ಬಾಲಕೃಷ್ಣ ಅವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಬಿಜೆಪಿ ಪರವಾಗಿ ದಾಳಿಗಳನ್ನು ನಡೆಸುತ್ತಿದ್ದಾರೆ. ಹೀಗಾಗಿ ಕೂಡಲೇ ಅವರನ್ನು ವರ್ಗಾವಣೆ ಮಾಜಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನ ಹಿರಿಯ ಮುಖಂಡರು ನಿನ್ನೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಅಲ್ಲದೆ ಈ ಬಗ್ಗೆ ಐಟಿ ಇಲಾಖೆಗೆ ಮನವಿ ಕೂಡ ನೀಡಿದ್ದ ಕೈ ಮುಖಂಡರು ಒಂದೇ ವಾರದಲ್ಲಿ ಇಬ್ಬರು ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿಯಾಗಿದೆ. ಹೀಗಾಗಿ ದಾಳಿ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ. ಕೂಡಲೇ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT