ಕಲಬುರಗಿ: ಡಾಬಾಗೆ ಊಟಕ್ಕೆಂದು ತೆರಳಲು ರಸ್ತೆ ಬದಿ ನಿಂತಿದ್ದವರ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ನಾಲ್ವರು ದುರ್ಮರಣ ಹೊಂದಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ಬಳಿ ಈ ಅಪಘಾತ ಸಂಭವಿಸಿದೆ. ಊಟಕ್ಕೆಂದು ಡಾಬಾಗೆ ಹೋಗಲು ರಸ್ತೆ ಬದಿ ನಿಂತಿದ್ದವರಿಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ.
ಟಿಪ್ಪರ್ ಲಾರಿ ಡಿಸೇಲ್ ಹಾಕಿಸಿಕೊಳ್ಳಲು ಬಂಕ್ ಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.