ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು; ಪ್ರೀತಿಸಿದ ಯುವತಿಯೊಂದಿಗೆ ಮದುವೆಯಾಗುವಂತೆ ಒತ್ತಡ- ಬೇಸತ್ತು ಯುವಕ ಆತ್ಮಹತ್ಯೆಗೆ ಶರಣು

ಪ್ರೀತಿಸುತ್ತಿದ್ದ ಯುವತಿಯೊಂದಿಗೆ ವಿವಾಹವಾಗುವಂತೆ ಒತ್ತಡ ಹೇರಿದ್ದಕ್ಕೆ ತೀವ್ರವಾಗಿ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ...

ಮೈಸೂರು: ಪ್ರೀತಿಸುತ್ತಿದ್ದ ಯುವತಿಯೊಂದಿಗೆ ವಿವಾಹವಾಗುವಂತೆ ಒತ್ತಡ ಹೇರಿದ್ದಕ್ಕೆ ತೀವ್ರವಾಗಿ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. 
ಕ್ಯಾತಮಾರನಹಳ್ಳಿ ನಿವಾಸಿಯಾಗಿದ್ದ ದೀಪಕ್ (23) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಕಳೆದ ಎರಡು ವರ್ಷಗಳಿಂದ ದೀಪಕ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರವನ್ನು ಯುವತಿ ಮನೆಯವರಿಗೆ ತಿಳಿಸಿದ್ದಳು. 
ಇದರಂತೆ ಯುವತಿಯ ಮನೆಯವರು ಯುಗಾದಿ ಹಬ್ಬದ ದಿನದಂದು ದೀಪಕ್ ನನ್ನು ಮನೆಗೆ ಕರೆದಿದ್ದಾರೆ. ಈ ವೇಳೆ ಮದುವೆ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಈ ವೇಳೆ ಈಗಲೇ ಮದುವೆ ಬೇಡ ಎಂದು ಹೇಳಿದ್ದಾರೆ. ಈ ವೇಳೆ ತೀವ್ರವಾಗಿ ಕೆಂಡಾಮಂಡಲಗೊಂಡ ಯುವತಿಯ ಪೋಷಕರು ಯುವಕನನ್ನು ಪೊಲೀಸ್ ಠಆಣೆಗೆ ಕರೆದೊಯ್ದಿದ್ದಾರೆ. ಬಳಿಕ ಯುವಕರನ ತಾಯಿಯನ್ನು ಪೊಲೀಸ್ ಠಾಣೆಗೆ ಕರೆಸಿದ ಪೊಲೀಸರು ಮಾತುಕತೆ ನಡೆಸಿದ್ದಾರೆ. ಈ ವೇಳೆ ಯುವಕನ ತಾಯಿ ಮಂಗಳ ಮದುವೆಗೆ ಒಪ್ಪಿ, ವಿವಾಹದ ದಿನಾಂಕವನ್ನು ನಿಶ್ಚಯಿಸುವುದಾಗಿ ತಿಳಿಸಿದ್ದಾರೆ. 
ಇದಾದ ಬಳಿಕ ಯುವತಿಯ ಪೋಷಕರು ಶೀಘ್ರಗತಿಯಲ್ಲಿ ವಿವಾಹ ದಿನಾಂಕವನ್ನು ನಿಶ್ಚಯ ಮಾಡುವಂತೆ ಒತ್ತಡ ಹೇರಿದ್ದಾರೆ. ಇದರಿಂದ ನೊಂದು ದೀಪಕ್ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಾಯಿ ಮಂಗಳಾ ಅವರು ಆರೋಪಿಸಿದ್ದಾರೆ. 
ದೀಪಕ್ ಹಲವು ವರ್ಷಗಳ ಹಿಂದೆಯೇ ತನ್ನ ತಂದೆಯನ್ನು ಕಳೆದುಕೊಂಡಿದ್ದು, ಹಿರಿಯ ಸಹೋದರನೊಬ್ಬ ಇದ್ದಾನೆ. ದೀಪಕ್ ಆತ್ಮಹತ್ಯೆಗೆ ಶರಣಾಗುವ ಹಿಂದಿನ ದಿನ ತಾಯಿ ಮಂಗಳ ಅವರು ತಮ್ಮ ಹಿರಿಯ ಪುತ್ರನೊಂದಿಗೆ ಕೆಲಸ ಮೇರೆಗೆ ಬೆಂಗಳೂರು ನಗರಕ್ಕೆ ಬಂದಿದ್ದಾರೆ. ಮರುದಿನ ಮನೆಗೆ ಹೋದಾಗ ದೀಪಕ್ ನೇಣಿಗೆ ಶರಣಾಗಿರುವುದು ಕಂಡು ಬಂದಿದೆ. 
ಪುತ್ರನ ಸಾವಿನ ಹಿನ್ನಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಂಗಳಾ ಅವರು ನನ್ನ ಪುತ್ರನ ಸಾವಿಗೆ ಕಾರಣರಾದ ಯಾರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಉದಯ್ ಗಿರಿ ಠಾಣಾ ಪೊಲೀಸರು, ಯುವತಿಯ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರಕರಣ ಸಂಬಂಧ ಈ ವರೆಗೂ ಯಾರನ್ನು ಬಂಧನಕ್ಕೊಳಪಡಿಸಲಾಗಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT