ಸಾಂದರ್ಭಿಕ ಚಿತ್ರ 
ರಾಜ್ಯ

ಪೊಲೀಸ್ ಗಸ್ತು ಹೆಚ್ಚಿಸಲು 312 ಬೊಲೆರೊವನ್ನು ಖರೀದಿಸಲಿರುವ ರಾಜ್ಯ ಸರ್ಕಾರ

ರಾಜ್ಯದಲ್ಲಿ ಭದ್ರತೆಯನ್ನು ಹೆಚ್ಚಿಸಲು ಮುಂದಾಗಿರುವ ರಾಜ್ಯ ಸರ್ಕಾರ ಪೊಲೀಸರ ಗಸ್ತು ತಿರುಗಲು 312 ...

ಬೆಂಗಳೂರು: ರಾಜ್ಯದಲ್ಲಿ ಭದ್ರತೆಯನ್ನು ಹೆಚ್ಚಿಸಲು ಮುಂದಾಗಿರುವ ರಾಜ್ಯ ಸರ್ಕಾರ ಪೊಲೀಸರ ಗಸ್ತು ತಿರುಗಲು 312 ಮಹೀಂದ್ರ ಬೊಲೆರೊ ಎಸ್ ಯುವಿಗಳನ್ನು ಖರೀದಿಸಲಿದೆ.

ಸುಮಾರು 20 ಕೋಟಿ ರೂಪಾಯಿ ವೆಚ್ಚದಲ್ಲಿ ಮಹೀಂದ್ರ ಬೊಲೆರೊವನ್ನು ಖರೀದಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಜನರಿಗೆ ಅಗತ್ಯವಿರುವಲ್ಲಿ, ಅಗತ್ಯ ಸಂದರ್ಭಗಳಲ್ಲಿ ಪೊಲೀಸರ ನೆರವು ಸಿಗಬೇಕೆಂಬುದು ಇದರ ಉದ್ದೇಶವಾಗಿದೆ. ರಾಜ್ಯ ಸಚಿವ ಸಂಪುಟ ಇದೇ ಸಮಯದಲ್ಲಿ ರಾಜ್ಯ ಸರ್ಕಾರದ ಸುಮಾರು 48 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಶೂ ಮತ್ತು ಸಾಕ್ಸ್ ವಿತರಣೆ ಮಾಡುವ ಪ್ರಸ್ತಾವನೆಗೆ ಕೂಡ ಒಪ್ಪಿಗೆ ಸೂಚಿಸಿದೆ. ಒಂದನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಶೂ ವಿತರಣೆ ಮಾಡಲಾಗುತ್ತಿದ್ದು ಇದಕ್ಕೆ ಸುಮಾರು 130 ಕೋಟಿ ರೂಪಾಯಿ ವೆಚ್ಚ ತಗುಲಲಿದೆ.

ಕೋಲಾರದಲ್ಲಿ ಸದ್ಯದಲ್ಲಿಯೇ ಆಧುನಿಕ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಲಿದೆ. ಇದಕ್ಕಾಗಿ 16 ಎಕರೆ ಜಮೀನನ್ನು ನೀಡುವ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ಬೀದರ್ ವಿಮಾನ ನಿಲ್ದಾಣದಿಂದ ನಾಗರಿಕ ವಿಮಾನಯಾನ ಕಾರ್ಯನಿರ್ವಹಣೆಯ ಅಡೆತಡೆಗಳನ್ನು ನಿವಾರಿಸಲು ರಾಜ್ಯ ಸಚಿವ ಸಂಪುಟ ಬೀದರ್ ವಿಮಾನ ನಿಲ್ದಾಣದ ನಾಗರಿಕ ಟರ್ಮಿನಲ್ ನ್ನು ಭೋಗ್ಯಕ್ಕೆ ನೀಡಲು ನಿರ್ಧರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT