ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 
ರಾಜ್ಯ

ಕರುನಾಡ ಜಾಗೃತಿ ಯಾತ್ರೆ; 2 ದಿನ ರಾಜ್ಯಕ್ಕೆ ಅಮಿತ್ ಶಾ ಭೇಟಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮಾ.26 ಮತ್ತು 29 ರಂದು ರಾಜ್ಯಕ್ಕೆ ಎರಡು ದಿನಗಳ ಕಾಲ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ...

ದಾವಣಗೆರೆ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮಾ.26 ಮತ್ತು 29 ರಂದು ರಾಜ್ಯಕ್ಕೆ ಎರಡು ದಿನಗಳ ಕಾಲ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. 
ಕರುನಾಡ ಜಾಗೃತಿ ಯಾತ್ರೆ ಹೆಸರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು ಪಾಲ್ಗೊಳ್ಳಲಿದ್ದಾರೆಂದು ವರದಿಗಳು ತಿಳಿಸಿವೆ. 
ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು ಮಂಡ್ಯ ಹಾಗೂ ಚಾಮರಾಜನಗರ ಸೇರಿದಂತೆ ಇತರೆ ಭಾಗಗಳಲ್ಲಿ ಅಮಿತ್ ಶಾ ಪ್ರವಾಸ ಕೈಗೊಂಡಿದ್ದಾರೆ.
ಸೋಮವಾರ ತುಮಕೂರಿಗೆ ಆಗಮಿಸಿರುವ ಅಮಿತ್ ಶಾ ಅವರು ನಂತರ ಡಾ.ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆಯುವ ಸಲುವಾಗಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ತಿಪಟೂರಿನಲ್ಲಿ ಆಯೋಜಿಸಿರುವ ತೆಂಗು ಬೆಳಗಾರರ ಸಮಾವೇಶದಲ್ಲಿ ಭಾಗಿಯಾಗಿ ನಂತರ ರಾಷ್ಟ್ರಕವಿ ಕುವೆಂಪು ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆಂದು ಮಾಜಿ ಎಂಎಲ್'ಸಿ ಹೆಚ್ ಶಿವಯೋಗಿಸ್ವಾಮಿಯವರು ಹೇಳಿದ್ದಾರೆ. 
ತೀರ್ಥಹಳ್ಳಿಯಲ್ಲಿ ಅಡಕೆ ಬೆಳೆಗಾರರ ಜೊತೆಗೆ ಸಂವಾದ ನಡೆಸಲಿರುವ ಅಮಿತ್ ಶಾ ಅವರು, ಮಂಗಳವಾರ ಚಳ್ಳಕೆರೆಯಲ್ಲಿ ಪರಿಶಿಷ್ಟ ಪಂಗಡಗಳ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಅದೇ ದಿನ ದಾವಣಗೆರೆ ಜಿಲ್ಲೆಯ ದೊಡ್ಡಬಾತಿಯಲ್ಲಿ ನಿಗದಿಯಾಗಿರುವ ಮುಷ್ಠಿ ಧಾನ್ಯ ಅಭಿಯಾನದಲ್ಲಿ ಭಾಗವಹಿಸಿ ರೈತರ ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಐವರು ರೈತರ ಮನೆಗೆ ಭೇಟಿ ನೀಡಿ ರೈತರ ಮುಷ್ಠಿಯಿಂದ ಅಕ್ಕಿಯನ್ನು ಪಡೆಯಲಿದ್ದಾರೆ. ಅಮಿತ್ ಶಾ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಕೂಡ ಸಾಥ್ ನೀಡಲಿದ್ದಾರೆ. ಬಳಿಕ ಯಡಿಯೂರಪ್ಪ ಅವರು ರೈತರ ಕುರಿತ ಪತ್ರಗಳನ್ನು ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಕರಣಗಳ ಪಟ್ಟಿಯನ್ನು ಅಮಿತಾ ಶಾ ಅವರಿಗೆ ನೀಡಲಿದ್ದಾರೆ. 
ಬಳಿಕ ಜಿಎಂಐ ಕಾನ್ಫರೆನ್ಸ್ ಹಾಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಅವರು ನಂತರ ಶೃಂಗೇರಿಗೆ ತೆರಳುವ ಅವರು ತರಲಬಲು ಮಠ, ಮುರುಗಮಠ ಮತ್ತು ಮಾದರಾಚಂಯ್ಯ ಮಠಕ್ಕೆ ಭೇಟಿ ನೀಡಲಿದ್ದಾರೆಂದು ಶಿವಯೋಗಿ ಸ್ವಾಮಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT