ದಾವಣಗೆರೆ: ಹನಿಟ್ರ್ಯಾಪ್​ ಮಾಡುತ್ತಿದ್ದ ದಂಪತಿಗಳ ಬಂಧನ 
ರಾಜ್ಯ

ದಾವಣಗೆರೆ: ಹನಿಟ್ರ್ಯಾಪ್​ ಮಾಡುತ್ತಿದ್ದ ದಂಪತಿಗಳ ಬಂಧನ

ಆಭರಣ ವ್ಯಾಪಾರಿಯನ್ನು ಹನಿಟ್ರ್ಯಾಪ್​ ಮಾಡಿ ಲಕ್ಷಾಂತರ ರೂ. ವಂಚಿಸುತ್ತಿದ್ದ ದಂಪತಿಗಳನ್ನು ದಾವಣಗೆರೆ ಜಿಲ್ಲಾ ಪೋಲೀಸರು ಬಂಧಿಸಿದ್ದಾರೆ.

ದಾವಣಗೆರೆ: ಆಭರಣ ವ್ಯಾಪಾರಿಯನ್ನು ಹನಿಟ್ರ್ಯಾಪ್​ ಮಾಡಿ ಲಕ್ಷಾಂತರ ರೂ. ವಂಚಿಸುತ್ತಿದ್ದ ದಂಪತಿಗಳನ್ನು ದಾವಣಗೆರೆ ಜಿಲ್ಲಾ ಪೋಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ವೆಂಕಟೇಶ (32) ರೇಖಾ (26) ಎಂದು ಗುರುತಿಸಲಾಗಿದ್ದು ವೆಂಕಟೇಶ್ ತನ್ನ ಪತ್ನಿ ರೇಖಾಳನ್ನು ಮುಂದಿಟ್ಟುಕೊಂಡು ಹನಿಟ್ರ್ಯಾಪ್​ ನಡೆಸುತ್ತಿದ್ದ. 
ಆಭರಣ ವ್ಯಾಪಾರಿ ಸುರೇಶನನ್ನು ಬಲೆಗೆ ಬೀಳಿಸಿಕೊಂಡ ರೇಖಾ ರ ಆತನನ್ನು ತನ್ನ ಮನೆಗೆ ಕರೆಸಕೊಂಡು ಪ್ರೇಮದ ನಾಟಕವಾಡಿ ಮರಳು ಮಾಡಿದ್ದಾಳೆ. ಕೋಣೆಗೆ ಕರೆದೊಯ್ದು ಅವನೊಡನೆ ಚಕ್ಕಂದವಾಡಿದ್ದಾಳೆ. ಇದನ್ನು ಆಕೆಯ ಪತಿ ವೆಂಕಟೇಶ್ ವೀಡಿಯೋ ಚಿತ್ರೀಕರಣ ಮಾಡಿ ಬ್ಲಾಕ್‌ಮೇಲ್ ಮಾಡಿದ್ದಾನೆ. 
ವ್ಯಾಪಾರಿ ಸುರೇಶ್ 15 ಲಕ್ಷ ನೀಡಬೇಕು ಎಂದು ಬ್ಲ್ಯಾಕ್​ ಮೇಲ್​ ಮಾಡಿದ್ದ ವೆಂಕಟೇಶ್ ಗೆ ವ್ಯಾಪಾರಿ ಐದು ಲಕ್ಷ ನೀಡಿದ್ದನೆಂದು ತಿಳಿದುಬಂದಿದೆ. ಮತ್ತೆ  10 ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದ ದಂಪತಿಗಳ ವಿರುದ್ಧ ಆಭರಣ ವ್ಯಾಪಾರಿ ಪೋಲೀಸರಿಗೆ ದೂರಿತ್ತಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಸವನಗರ ಪೊಲೀಸ್ ಠಾಣೆ ಪೊಲೀಸರು ಆರೋಪಿ ದಂಪತಿಗಳನ್ನು ಬಂಧಿಸಿ ಕಂಬಿಗಳ ಹಿಂದೆ ಕಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT