ಹೈಕೋರ್ಟ್ 
ರಾಜ್ಯ

ಕ್ಲಬ್ ಗೆ ಭೂಮಿ ನೀಡಿಕೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಹಕಾರ ನಗರ ರಕ್ಷಣಾ ಕಾಲೋನಿ ನಿವಾಸಿಗಳು

ನಾಗರಿಕ ವಸತಿ ಪ್ರದೇಶದ ನಿವೇಶನವನ್ನು ನಿಯಮ ಉಲ್ಲಂಘಿಸಿ ರಾಜ್ಯಸರ್ಕಾರ ಕ್ಲಬ್ ಗೆ ನೀಡಿರುವುದನ್ನು ವಿರೋಧಿಸಿ ಸಹಕಾರ ನಗರ ರಕ್ಷಣಾ ಕಾಲೋನಿ ನಿವಾಸಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಬೆಂಗಳೂರು : ನಾಗರಿಕ ವಸತಿ ಪ್ರದೇಶದ ನಿವೇಶನವನ್ನು  ನಿಯಮ ಉಲ್ಲಂಘಿಸಿ ರಾಜ್ಯಸರ್ಕಾರ ಕ್ಲಬ್ ಗೆ ನೀಡಿರುವುದನ್ನು ವಿರೋಧಿಸಿ ಸಹಕಾರ ನಗರ ರಕ್ಷಣಾ ಕಾಲೋನಿ ನಿವಾಸಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಸಂಬಂಧ ಕೆ. ಎಚ್. ಸತ್ಯನಾರಾಯಣ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ಬಿ.ಎಂ. ಶ್ಯಾಮ್ ಪ್ರಸಾದ್ ಅವರನ್ನೊಳಗೊಂಡ ಪೀಠ, ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದ್ದೂಡಿದೆ.

ಕೃಷಿ ಸಚಿವ ಕೃಷ್ಣಬೈರೇಗೌಡ ಅಧ್ಯಕ್ಷರಾಗಿರುವ ಕ್ಲಬ್ ಗೆ ನಿವೇಶನ ನೀಡಲಾಗಿದೆ ಎಂದು ಒಬ್ಬರ ಅರ್ಜಿಯಲ್ಲಿ ತಿಳಿಸಲಾಗಿದೆ.

ಮತ್ತೊಂದು ಅರ್ಜಿಯಲ್ಲಿ ಬಿಡಿಎ , ಬಿಬಿಎಂಪಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಸಚಿವರ ಪ್ರಭಾವದಿಂದಾಗಿ ಕೊತಿ ಹೊಸಹಳ್ಳಿಯಲ್ಲಿನ 3,336 ಚದರ ಅಡಿಯ ನಾಗರಿಕ ವಸತಿ ನಿವೇಶನವನ್ನು ಬಿಡಿಎ 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕ್ಲಬ್ ಗೆ ನೀಡಿದೆ ಎಂದು ಆರೋಪಿಸಲಾಗಿದೆ.



 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT