ಸಾಂದರ್ಭಿಕ ಚಿತ್ರ 
ರಾಜ್ಯ

ಬರೋಬ್ಬರೀ 12 ವರ್ಷಗಳ ನಂತರ ಅರ್ಕಾವತಿ ಲೇಔಟ್ ಗೆ ಸಿಕ್ತು ವಿದ್ಯುತ್!

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅರ್ಕಾವತಿ ಲೇಔಟ್ ನಲ್ಲಿ ಪಡೆದ ನಿವೇಶನಗಳಲ್ಲಿ ಮನೆ ಕಟ್ಟಲು ಮಾಲೀಕರು ಈಗ ಮನಸು ಮಾಡುತ್ತಿದ್ದಾರೆ....

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅರ್ಕಾವತಿ ಲೇಔಟ್ ನಲ್ಲಿ ಪಡೆದ ನಿವೇಶನಗಳಲ್ಲಿ ಮನೆ ಕಟ್ಟಲು ಮಾಲೀಕರು ಈಗ ಮನಸು ಮಾಡುತ್ತಿದ್ದಾರೆ.
ಸುಮಾರು 12 ವರ್ಷಗಳ ನಂತರ ಅಂತಿಮವಾಗಿ ಅರ್ಕಾವತಿ ಲೇಔಟ್ ವಿದ್ಯುತ್ ಸಂಪರ್ಕ ನೀಡಲಾಗುತ್ತಿದೆ.  ವಿದ್ಯುತ್ ಮೂಲ ಸೌಕರ್ಯ ಕಲ್ಪಿಸಲು ಅಗತ್ಯವಾದ ಎಲ್ಲಾ ವಸ್ತುಗಳನ್ನು ಸರಬರಾಜು ಮಾಡಲು ಖಾಸಗಿ ಕಂಪನಿಗೆ ಮಾರ್ಚ್ 26 ರಂದು ಸೂಚನೆ ನೀಡಲಾಗಿದೆ.
ಸುಮಾರು 600 ಎಕರೆ ಜಾಗದಲ್ಲಿ ನಿರ್ಮಾವಾಗಿರುವ ಅರ್ಕಾವತಿ ಲೇಔಟ್ ನಲ್ಲಿ ನಿವೇಶನ ಪಡೆದು ಮನೆ ಕಟ್ಟಲಾಗದ ಸ್ಥಿತಿಯಲ್ಲಿದ್ದ ಮಾಲೀಕರು ಈಗ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ.  ಬಳ್ಳಾರಿ ರಸ್ತೆ ಮತ್ತು ಓಲ್ಡ್ ಮದ್ರಾಸ್ ರಸ್ತೆಯ ಜಕ್ಕೂರು, ರಾಜನಹಳ್ಳಿ, ಸಂಪಿಗೆಹಳ್ಳಿ, ಥಣಿಸಂದ್ರ, ಹೆಣ್ಣೂರು, ಕೆ. ನಾರಾಯಣಪುರ ಹಾಗೂ ಬೈರತಿ ಖಾನೆ ಸೇರಿದಂತೆ ಸುಮಾರು 13 ಗ್ರಾಮಗಳು ಈ ಲೇಔಟ್ ವ್ಯಾಪ್ತಿಗೆ ಬರುತ್ತವೆ,
ಈ ಅರ್ಕಾವತಿ ಲೇಔಟ್ ನಲ್ಲಿ ಸುಮಾರು 6 ಸಾವಿರ ಮನೆಗಳನ್ನು ನಿರ್ಮಿಸಬಹುದಾಗಿದೆ. ಮೂಲಭೂತ ಸೌಕರ್ಯದ ಕೊರತೆಯಿಂದಾಗಿ ಇದುವರೆಗೂ ಇಲ್ಲಿ ಮನೆ ಕಟ್ಟಲು ಮಾಲೀಕರು ಹಿಂದೇಟು ಹಾಕುತ್ತಿದ್ದರು. ಆದರೆ ಈ ಪ್ರದೇಶದಲ್ಲಿ  185 ಮನೆ ನಿರ್ಮಾಣವಾಗಿದ್ದು ಕೆಲವು ಮಂದಿ ವಾಸವಾಗಿದ್ದಾರೆ, ಇವರು ಬೆಸ್ಕಾಂ ಗೆ ಅತ್ಯಧಿಕ ಪ್ರಮಾಣದಲ್ಲಿ ಹಣ ಪಾವತಿಸಿ ವಿದ್ಯುತ್ ಸಂಪರ್ಕ ಪಡೆದು ಕೊಂಡಿದ್ದಾರೆ.
ಅರ್ಕಾವತಿ ಲೇಔಟ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಖಾಸಗಿ ಕಂಪನಿ ಜೊತೆ 221 ಕೋಟಿ ರು ಒಪ್ಪಂದಕ್ಕೆ ಸಹಿ ಮಾಡಲಾಗಿದೆ ಎಂದು ಬಿಡಿಎ ಅಧಿಕಾರಿಗಳು  ಸ್ಪಷ್ಟ ಪಡಿಸಿದ್ದಾರೆ.
ತಾತ್ಕಲಿಕ ಸಂಪರ್ಕ ಪಡೆದಿರುವ ನಿವಾಸಿಗಳು ಶೀಘ್ರವೇ ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯಬಹುದಾಗಿದೆ, ಸಾಧಾರಣ ಸಂಪರ್ಕಕ್ಕಾಗಿ ನಿವಾಸಿಗಳು 30 ಯುನಿಟ್ ವರೆಗೆ 2.90 ರು ಪಾವತಿಸಬೇಕು. ಅದ್ದಾ ನಂತರ ಬಳಸುವ ಪ್ರತಿ ಯುನಿಟ್ ಗೆ ಬೇರೆ ಬೇರೆ ದರ ವಿಧಿಸಲಾಗುವುದು ಎಂದು ಬೆಸ್ಕಾಂ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈಗ ತಾತ್ಕಾಲಿಕ ಸಂಪರ್ಕ ಪಡೆದುಕೊಂಡಿರುವ ಗ್ರಾಹಕರು ಪ್ರತಿ ಯುನಿಟ್ ಗೆ 9.50 ರು ಪಾವತಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT