ಮಹೇಶ್ ವಿಕ್ರಮ್ ಹೆಗಡೆ ಪ್ರಕಟಿಸಿದ್ದ ಸುದ್ದಿ 
ರಾಜ್ಯ

ಸುಳ್ಳುಸುದ್ದಿ ಪ್ರಕಟ: ಪೋಸ್ಟ್‌ಕಾರ್ಡ್‌ ಡಾಟ್‌ ನ್ಯೂಸ್‌’ ಮಾಲಿಕ ಸೆರೆ

ಕೋಮು ಸಂಘರ್ಷ ಹುಟ್ಟು ಹಾಕುವಂತ ಸುಳ್ಳು ಸುದ್ದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಪೋಸ್ಟ್‌ಕಾರ್ಡ್‌ ಡಾಟ್‌ ನ್ಯೂಸ್‌’ ಮಾಲೀಕ ಮಹೇಶ್ ವಿಕ್ರಮ್ ಹೆಗಡೆ ಅವರನ್ನು ...

ಬೆಂಗಳೂರು: ಕೋಮು ಸಂಘರ್ಷ ಹುಟ್ಟು ಹಾಕುವಂತ ಸುಳ್ಳು ಸುದ್ದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಪೋಸ್ಟ್‌ಕಾರ್ಡ್‌ ಡಾಟ್‌ ನ್ಯೂಸ್‌’ ಮಾಲೀಕ ಮಹೇಶ್ ವಿಕ್ರಮ್ ಹೆಗಡೆ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಹೇಶ್ ಹೆಗ್ಡೆ ವಿರುದ್ಧ 2 ದೂರುಗಳು ದಾಖಲಾಗಿವೆ, ಒಂದು ಸಂಜಯನಗರ ಪೊಲೀಸ್ ಠಾಣೆಯಲ್ಲಿ  ಮತ್ತೊಂದು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ, 
ಮಾರ್ಚ್ 18 ರಂದು ಜೈನ ಮುನಿ ಉಪಾಧ್ಯಾಯ ಮಾಯಾಂಕ್ ಸಾಗರ್‌ ಜೀ ಅವರ ಮೇಲೆ ಮುಸ್ಲಿಮ್ ಯುವಕನೊಬ್ಬ ಹಲ್ಲೆ ಮಾಡಿದ್ದಾನೆ’ಸಿದ್ದರಾಮಯ್ಯ ಅವರ ಕರ್ನಾಟಕದಲ್ಲಿ ಯಾರೋಬ್ಬರಿಗೂ ರಕ್ಷಣೆ ಇಲ್ಲ ಎನ್ನುವಂತ ಸುದ್ದಿ ಹಾಕಿ ಫೋಟೋ ಜೊತೆ ಪ್ರಕಟಿಸಿದ್ದರು,
ಈ ಸುಳ್ಳು ಸುದ್ದಿ ಸಂಬಂಧ ಗಫರ್ ಬೇಗ್‌ ಎಂಬುವವರು ದೂರು ನೀಡಿದ್ದರು. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ (ಧರ್ಮ, ಜನಾಂಗ, ಜನ್ಮಸ್ಥಳ, ಭಾಷೆಗಳ ಆಧಾರದಲ್ಲಿ ಗುಂಪುಗಳ ಮಧ್ಯೆ ದ್ವೇಷ ಬಿತ್ತುವುದು ಮತ್ತು ಸಾಮರಸ್ಯಕ್ಕೆ ಧಕ್ಕೆ ತರುವಂಥ ಕೃತ್ಯಗಳನ್ನೆಸಗುವುದು), 295ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೃತ್ಯ) ಮತ್ತು 120ಬಿ (ಅಪರಾಧ ಸಂಚು) ಅನ್ವಯ ಪ್ರಕರಣ ದಾಖಲಾಗಿದೆ. 
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಗೌರವ್ ಪ್ರಧಾನ್ ಹಾಗೂ ದೀಪಕ್ ಶೆಟ್ಟಿ ಎಂಬುವರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅವರಿಬ್ಬರು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT