ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು ಶೂಟೌಟ್; ರೌಡಿ ಶೀಟರ್ ಪರಮೇಶ್ ಕಾಲಿಗೆ ಗುಂಡು

ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಶೂಟೌಟ್ ನಡೆದಿದ್ದು, ತಪ್ಪಿಸಿಕೊಳ್ಳುವ ಭರದಲ್ಲಿ ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲು ಪ್ರಯತ್ನಿಸಿದ ರೌಡಿ ಶೀಟರ್ ಪರಮೇಶ್ ಕಾಲಿಗೆ ಪೊಲೀರು ಗುಂಡು ಹಾರಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಶೂಟೌಟ್ ನಡೆದಿದ್ದು, ತಪ್ಪಿಸಿಕೊಳ್ಳುವ ಭರದಲ್ಲಿ ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲು ಪ್ರಯತ್ನಿಸಿದ ರೌಡಿ ಶೀಟರ್ ಪರಮೇಶ್ ಕಾಲಿಗೆ ಪೊಲೀರು ಗುಂಡು ಹಾರಿಸಿದ್ದಾರೆ.
ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಪ್ಪಿಸಿಕೊಳ್ಳುವ ಭರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗ ರೌಡಿ ಶೀಟರ್ ಮತ್ತು ಆತನ ಸಹಚರನ ಮೇಲೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. 
ಪೊಲೀಸ್ ಮೂಲಗಳ ಪ್ರಕಾರ ತಲಘಟ್ಟಪುರ ಪೊಲೀಸ್​ ಠಾಣೆ ವ್ಯಾಪ್ತಿಯ ರೌಡಿಶೀಟರ್​ ಪರಮೇಶ್ ಮತ್ತು ಆತನ ಸಹಚರನನ್ನು ಬಂಧಿಸಲು ತೆರಳಿದಾಗ ಈ ಘಟನೆ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ದಕ್ಷಿಣ ವಿಭಾಗದ ಡಿಸಿಪಿ ಶರಣಪ್ಪ ಅವರು, ‘ಶೂಟೌಟ್​​ನಲ್ಲಿ ರೌಡಿಶೀಟರ್ ಪರಮೇಶ್ ಹಾಗೂ ಅವನ ಸಹಚರ ಸಂತೋಷ್ ಕಾಲಿಗೆ ಗುಂಡು ತಗುಲಿದ್ದು, ಬನಶಂಕರಿಯ ಚಿಕ್ಕೇಗೌಡನ ಪಾಳ್ಯದಲ್ಲಿ ಘಟನೆ ನಡೆದಿದೆ. ಕೊಲೆ ಕೇಸ್​ನಲ್ಲಿ ಪರಮೇಶ್ ಬಂಧನಕ್ಕೆ ತಲಘಟ್ಟಪುರ ಪೊಲೀಸರು ತೆರಳಿದ್ದ ವೇಳೆ ಪಿಸ್ತೂಲ್​ನಿಂದ ಪೊಲೀಸರ ಮೇಲೆ ಫೈರಿಂಗ್ ಮಾಡಲು ಯತ್ನಿಸಿದ್ದಾರೆ. ಅಲ್ಲದೆ, ಹೆಡ್​ ಕಾನ್ಸ್​ಟೆಬಲ್‌ ಸುರೇಶ್, ಪೇದೆ ನೇಮಿನಾಥ್ ಮೇಲೆ ರೌಡಿಶೀಟರ್​ಗಳು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗೆ ರೌಡಿಶೀಟರ್​ಗಳ ಮೇಲೆ ಇನ್ಸ್​ಪೆಕ್ಟರ್ ಶಿವಸ್ವಾಮಿ, ಎಸ್​ಐ ಶಿವಕುಮಾರ್ ಏರ್ ಫೈರ್ ಮಾಡಿದ್ದಾರೆ. ರೌಡಿಶೀಟರ್​ಗಳ ಕಾಲಿಗೆ ಗುಂಡು ತಗುಲಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ ಎಂದರು.
ತಲಘಟ್ಟಪುರ ಪೊಲೀಸ್​ ಠಾಣೆಯಲ್ಲಿ ಪರಮೇಶ್ ವಿರುದ್ಧ ಕೊಲೆ ಯತ್ನ,. ಸುಲಿಗೆ ಸೇರಿದಂತೆ ಒಟ್ಟು ಒಂಬತ್ತು ಪ್ರಕರಣಗಳು ಹಾಗೂ ಆತನ ಸಹಚರ ಸಂತೋಷ್​ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT