ಮಂಡ್ಯದಲ್ಲಿ ಬಿರುಸಿನ ಮಳೆ,:50 ಪ್ರಯಾಣಿಕರಿದ್ದ ಬಸ್ ಮೇಲೆ ಉರುಳಿದ ವಿದ್ಯುತ್ ಕಂಬ 
ರಾಜ್ಯ

ಮಂಡ್ಯದಲ್ಲಿ ಬಿರುಸಿನ ಮಳೆ, 50 ಪ್ರಯಾಣಿಕರಿದ್ದ ಬಸ್ ಮೇಲೆ ಉರುಳಿದ ವಿದ್ಯುತ್ ಕಂಬ

ಸೋಮವಾರ ರಾತ್ರಿ ಸುರಿದ ಗಾಳಿ ಮಳೆಗೆ ಚಲಿಸುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ: ಸೋಮವಾರ ರಾತ್ರಿ ಸುರಿದ ಗಾಳಿ ಮಳೆಗೆ  ಚಲಿಸುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. 
ಮಂಡ್ಯದ ಕೋಣನಹಳ್ಳಿ ಗೇಟ್ ಬಳಿ ಘಟನೆ ನಡೆದಿದ್ದು ಬಸ್ ನಲ್ಲಿ ಸುಮಾರು 50 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಕಂಬ ಬಿದ್ದೊಡನೆ ಬಸ್ ನ ಮುಂಭಾಗದಲ್ಲಿದ್ದ ಪ್ರಯಾಣಿಕರೆಲ್ಲ ಭಯಗೊಂಡು ಕಿರುಚಿಕೊಂಡಿದ್ದಾರೆ. ಆದರೆ ಅದೇ ಸಮಯಕ್ಕೆ ವಿದ್ಯುತ್ ಸಂಪರ್ಕವೂ ಕಡಿತಗೊಂಡ ಕಾರಣ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿವೆ. 
ಹೊಳಲು ಮಂಡ್ಯ ಮಾರ್ಗದಲ್ಲಿ ಕೇವಲ ಹದಿನೈದು ದಿನಗಳ ಹಿಂದಷ್ಟೇ ನೂತನವಾಗಿ ಕಂಬಗಳನ್ನು ನೆಡಲಾಗಿತ್ತು. ಕಳಪೆ ಕಾಮಗಾರಿಯಿಂದಾಗಿ ಆ ಕಂಬಗಳು ನೆಲಕ್ಕುರುಳಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT