ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಡಿಮೆ ಅಂಕದಿಂದ ಬೇಸತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ದ್ವಿತೀಯ ಪಿಯುಸಿಯಲ್ಲಿ ಅಂದುಕೊಂಡಷ್ಟು ಅಂಕಗಳು ಸಿಗಲಿಲ್ಲವೆಂದು 17 ವರ್ಷದ ವಿದ್ಯಾರ್ಥಿ ...

ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಅಂದುಕೊಂಡಷ್ಟು ಅಂಕಗಳು ಸಿಗಲಿಲ್ಲವೆಂದು 17 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಜಾಲ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ.

ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ತೇಜಸ್ ಗೌಡ ಶೇಕಡಾ 90 ಅಂಕ ಸಿಗಬಹುದೆಂದು ನಿರೀಕ್ಷೆ ಇಟ್ಟುಕೊಂಡಿದ್ದನು. ಆದರೆ ಸಿಕ್ಕಿದ್ದು ಶೇಕಡಾ 74ರಷ್ಟು ಮಾತ್ರ. ಈತ ರವಿಕುಮಾರ್ ಎಂಬ ರೈತನ ಪುತ್ರನಾಗಿದ್ದು ವಿದ್ಯಾರಣ್ಯಪುರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು.

ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಫಲಿತಾಂಶ ವೀಕ್ಷಿಸಿದ ನಂತರ 1.45ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಫಲಿತಾಂಶ ಬಂದ ಮೇಲೆ ತೇಜಸ್ ತೀವ್ರವಾಗಿ ಅಳುತ್ತಿದ್ದ, ತಾನು ಸಮಾಧಾನ ಕೂಡ ಮಾಡಿದ್ದೆ ಎಂದು ತಂದೆ ರವಿಕುಮಾರ್ ತಿಳಿಸಿದ್ದಾರೆ ಎಂದು ಚಿಕ್ಕಜಾಲ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಪೋಷಕರು ಟಿವಿ ನೋಡುತ್ತಿದ್ದಾಗ ಮನೆಯ ಕೋಣೆಯೊಳಗೆ ತೇಜಸ್ ಹೋದನು. ಕೆಲ ಹೊತ್ತು ಕಳೆದ ನಂತರ ಪೋಷಕರು ಬಾಗಿಲು ಬಡಿದಾಗ ಆಚೆ ಕಡೆಯಿಂದ ಪ್ರತಿಕ್ರಿಯೆ ಬರಲಿಲ್ಲ. ಬಾಗಿಲನ್ನು ಮುರಿದು ಒಳಗೆ ಹೋದಾಗ ಫ್ಯಾನಿಗೆ ನೇಣು ಹಾಕಿರುವುದು ಕಂಡು ಗಾಬರಿಯಾದರು. ಕೂಡಲೇ ಚಿಕ್ಕಜಾಲ ಪೊಲೀಸರಿಗೆ ವಿಷಯ ತಿಳಿಸಲಾಯಿತು.
ಮೃತದೇಹವನ್ನು ಶವಪರೀಕ್ಷೆಗೆ ಯಲಹಂಕ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ಗಳ ಗಡಿ ದಾಟಿದ Jos Buttler, ಪೊಲಾರ್ಡ್ ದಾಖಲೆ ಧ್ವಂಸ!

ChatGPT ತಂದ ಸಾವು: "ಏನಾಗಲ್ಲ, ಈ ಮಿಶ್ರಣ ಸೇವಿಸು" ಎಂದಿದ್ದ OpenAI; ಮಾತು ನಂಬಿದ 19 ವರ್ಷದ ಯುವಕ ಸಾವು; ತಾಯಿಯ ರೋಧನೆ!

Friendship Cupಗೆ ತಕ್ಕ ಗೌರವ: ಕಪ್ ಜೊತೆಗೇ ಆಫ್ಘನ್ ಅಭಿಮಾನಿಗಳ ಮನ ಗೆದ್ದ ಟೀಂ ಇಂಡಿಯಾ, Sarpanch Saab ಮಾಡಿದ್ದೇನು?