ಪಿಯುಸಿ ಮಂಡಳಿ 
ರಾಜ್ಯ

224 ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ತಡೆಹಿಡಿದ ಇಲಾಖೆ

ಪದವಿಪೂರ್ವ ಶಿಕ್ಷಣ ಇಲಾಖೆ ಅನೇಕ ಕಾರಣಗಳಿಗಾಗಿ ಸುಮಾರು 224 ಅಭ್ಯರ್ಥಿಗಳ ಫಲಿತಾಂಶವನ್ನು ...

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆ ಅನೇಕ ಕಾರಣಗಳಿಗಾಗಿ ಸುಮಾರು 224 ಅಭ್ಯರ್ಥಿಗಳ ಫಲಿತಾಂಶವನ್ನು ತಡೆಹಿಡಿದಿದೆ.

ಫಲಿತಾಂಶ ಪಟ್ಟಿಯಲ್ಲಿರುವ ಎಕ್ಸ್ ಗುರುತು ಫಲಿತಾಂಶವನ್ನು ತಡೆಹಿಡಿದಿರುವುದರ ಸೂಚನೆಯಾಗಿದೆ. ಅಂದರೆ ವಿದ್ಯಾರ್ಥಿ ಅನುತ್ತೀರ್ಣನಾಗಿದ್ದಾನೆಂದು ಅರ್ಥವಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಲವು ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯದ ಕೋಡ್ ಸಂಖ್ಯೆಯನ್ನು ತಪ್ಪಾಗಿ ಬರೆದಿದ್ದಾರೆ ಮತ್ತು ಇನ್ನು ಕೆಲವರು ತಮ್ಮ ಉತ್ತರ ಪತ್ರಿಕೆಗಳನ್ನು ಹರಿದುಕೊಂಡಿದ್ದಾರೆ. ಇಂತಹ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿಲ್ಲ ಎಂದು ಪಿಯುಸಿ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಎಕ್ಸ್ ಮಾರ್ಕ್ಸ್ ಎಂದರೆ ಅಂಕಪಟ್ಟಿಯಲ್ಲಿ ಅನುತ್ತೀರ್ಣ ಎಂದು ಇತ್ತೀಚೆಗೆ ನಗರದ ವಿದ್ಯಾರ್ಥಿಯೊಬ್ಪ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಈ ಕುರಿತು ಸ್ಪಷ್ಟೀಕರಣ ನೀಡಿರುವ ಇಲಾಖೆ ಅಧಿಕಾರಿಗಳು, ತನಿಖೆ ನಡೆಸಿದ ನಂತರ ಈ 224 ಅಭ್ಯರ್ಥಿಗಳ ಫಲಿತಾಂಶವನ್ನು ಘೋಷಿಸಲಾಗುವುದು ಎಂದು ಹೇಳಿದರು.

ಇಲ್ಲಿ ಎರಡು ವಿಭಾಗಗಳಿವೆ ಒಂದು ತಡೆಹಿಡಿಯುವುದು ಮತ್ತು ಒತ್ತಾಯಪೂರ್ವಕವಾಗಿ ತಡೆಹಿಡಿಯುವುದು. ಫಲಿತಾಂಶವನ್ನು ತಡೆಹಿಡಿದ ಸಂದರ್ಭದಲ್ಲಿ ಪರೀಕ್ಷಾರ್ಥಿಗಳ ಡೈರಿಯನ್ನು ಪರಿಶೀಲಿಸಲಾಗುತ್ತದೆ. ಒತ್ತಾಯಪೂರ್ವಕ ತಡೆಹಿಡಿದ ಸಂದರ್ಭದಲ್ಲಿ, ವಿಸ್ತೃತ ತನಿಖೆ ನಡೆಯುತ್ತದೆ.

ಪಿಯುಸಿ ಇಲಾಖೆ ನಿರ್ದೇಶಕಿ ಸಿ.ಶಿಖಾ, ಸುಮಾರು 181 ಫಲಿತಾಂಶವನ್ನು ತಡೆಹಿಡಿಯಲಾಗಿದ್ದು, 43 ಫಲಿತಾಂಶವನ್ನು ಒತ್ತಾಯಪೂರ್ವಕವಾಗಿ ತಡೆಹಿಡಿಯಲಾಗಿದೆ. ಒತ್ತಾಯಪೂರ್ವಕ ತಡೆಹಿಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪರೀಕ್ಷಾರ್ಥಿಗಳನ್ನು ಕರೆದು ಉತ್ತರ ಪತ್ರಿಕೆ ಹೇಗೆ ಹರಿದುಹೋಯಿತು ಎಂದು ನೋಡಲಾಗುತ್ತದೆ. ನಾವು ವಿದ್ಯಾರ್ಥಿಗಳನ್ನು ಮಾತ್ರ ದೂರುವುದಿಲ್ಲ. ಪರೀಕ್ಷಾ ಕೊಠಡಿಯಲ್ಲಿರುವ ಪರೀಕ್ಷಾರ್ಥಿಗಳು ಅಕ್ರಮತೆ ನಡೆದಿದ್ದನ್ನು ಪರೀಕ್ಷೆ ನಡೆಸಬೇಕು ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT