ಸಂಗ್ರಹ ಚಿತ್ರ 
ರಾಜ್ಯ

ದ್ವಿತೀಯ ಪಿಯು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ

ಪ್ರಸಕ್ತ ಸಾಲಿನ ಒಂದು ತಿಂಗಳು ಮುಂಚಿತವಾಗಿಯೇ ಅಂದರೆ ಮೇ 2ರಿಂದ ದ್ವಿತೀಯ ಪಿಯು ಆರಂಭವಾಗಿರುವ ಹಿನ್ನಲೆಯಲ್ಲಿ ಹಾಲಿ ಇರುವ ಹಳೆಯ ಬಸ್ ಪಾಸ್ ಗಳ ಅವಧಿ ವಿಸ್ತರಣೆ ಮಾಡಲಾಗಿದೆ.

ಬೆಂಗಳೂರು: ಪ್ರಸಕ್ತ ಸಾಲಿನ ಒಂದು ತಿಂಗಳು ಮುಂಚಿತವಾಗಿಯೇ ಅಂದರೆ ಮೇ 2ರಿಂದ ದ್ವಿತೀಯ ಪಿಯು ಆರಂಭವಾಗಿರುವ ಹಿನ್ನಲೆಯಲ್ಲಿ ಹಾಲಿ ಇರುವ ಹಳೆಯ ಬಸ್ ಪಾಸ್ ಗಳ ಅವಧಿ ವಿಸ್ತರಣೆ ಮಾಡಲಾಗಿದೆ.
ಪ್ರಸಕ್ತ ಸಾಲಿವ ಪಾಸು ವಿತರಣೆಯಾಗುವವರೆಗೂ ದ್ವಿತೀಯ ಪಿಯು ವಿದ್ಯಾರ್ಥಿಗಳು ಈಗಿರುವ ಬಸ್ ಪಾಸ್ ಗಳ ಮೂಲಕವೇ ಉಚಿತವಾಗಿ ಪ್ರಯಾಣಿಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೆಎಸ್ ಆರ್ ಟಿಸಿ ಅವಕಾಶ ಕಲ್ಪಿಸಿದೆ. ಒಂದು ತಿಂಗಳ ಮುಂಚಿತವಾಗಿ ಅಂದರೆ ಮೇ 2 ರಿಂದಲೇ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯು ತರಗತಿಗಳನ್ನು ಪ್ರಾರಂಭಿಸಿದ್ದು, ಇದರಿಂದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಲಿದೆ.
ಕೆಎಸ್ ಆರ್ ಟಿಸಿ ಪ್ರತೀ ವರ್ಷದಂತೆ ಜೂನ್ ತಿಂಗಳಿನಿಂದ ನೂತನ ಶೈಕ್ಷಣಿಕ ವರ್ಷದ ಬಸ್ ಪಾಸ್ ವಿತರಿಸಲಿದೆ. ಇದೇ ಕಾರಣಕ್ಕೆ ಕೆಎಸ್ ಆರ್ ಟಿಸಿ ನೂತನ ಬಸ್ ಪಾಸ್ ಗಳು ವಿತರಣೆಯಾಗುವವರೆಗೂ ಹಳೆಯ ಪಾಸ್ ಗಳನ್ನೇ ಬಳಕೆ ಮಾಡಲು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದೆ. ಅದರಂತೆ ಹಳೆಯ ಬಸ್ ಪಾಸ್ ಗಳ ಅವಧಿಯನ್ನು ಇನ್ನೂ ಒಂದು ತಿಂಗಳ ಕಾಲ ವಿಸ್ತರಣೆ ಮಾಡಿದೆ.
ಈ ಬಗ್ಗೆ ಬಿಎಂಟಿಸಿ, ವಾಯುವ್ಯ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳು ಮಾಹಿತಿ ನೀಡಿದ್ದು, ಈ ಸಂಸ್ಥೆಗಳ ವ್ಯಾಪ್ತಿಯ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದೆ ಎಂದು ಕೆಎಸ್ ಆರ್ ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT