ರಾಯಚೂರು: ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾದ ಬೆಂಕಿ ಅನಾಹುತಕ್ಕೆ ಸಿಕ್ಕು ದಂಪತಿಗಳು ಸಜೀವ ದಹನವಾದ ಘಟನೆ ರಾಯಚೂರು ಜಿಲ್ಲೆ ಮಾನ್ವಿಯಲ್ಲಿ ನಡೆದಿದೆ.
ಮಾನ್ವಿಯ ಅಮರೇಶ್ವರ ಕ್ಯಾಂಪ್ ನಲ್ಲಿ ಸಂಭವಿಸಿದ ಈ ಘತಣೆಯಲ್ಲಿ ಪ್ರಕಾಶ್(55 ), ಕೃಷ್ಣವೇಣಿ (50) ದಂಪತಿ ಸಾವನ್ನಪ್ಪಿದ್ದಾರೆ.
ಶನಿವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು ಮಲಗಿದ್ದ ದಂಪತಿಗಳು ಮಲಗಿದ್ದಲ್ಲೇ ಸುಟ್ಟು ಕರಕಲಾಗಿದ್ದಾರೆ.
ಸಧ್ಯ ಮಾನ್ವಿ ಪೋಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಾನ್ವಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.