ಕರ್ನಾಟಕ ಪೊಲೀಸ್ 
ರಾಜ್ಯ

ರೈಲಿನಲ್ಲಿ ಪರಾರಿಯಾಗುತ್ತಿದ್ದ ಅಪಹರಣಕಾರರನ್ನು ವಿಮಾನದಲ್ಲಿ ಹೋಗಿ ಬಂಧಿಸಿದ ಕರ್ನಾಟಕ ಪೊಲೀಸ್!

ಕರ್ನಾಟಕ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಮಾಲೀಕನನ್ನು ಕೊಲೆ ಮಾಡಿ ಅಸ್ಸಾಂಗೆ ತೆರಳುತ್ತಿದ್ದ ತೋಟದ ಮೂವರು ಭದ್ರತಾ ಸಿಬ್ಬಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ...

ಚಿಕ್ಕಬಳ್ಳಾಪುರ: ಕರ್ನಾಟಕ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಮಾಲೀಕನನ್ನು ಕೊಲೆ ಮಾಡಿ ಅಸ್ಸಾಂಗೆ ತೆರಳುತ್ತಿದ್ದ ತೋಟದ ಮೂವರು ಭದ್ರತಾ ಸಿಬ್ಬಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 
ಗೌರಿಬಿದನೂರು ತಾಲೂಕಿನ ಗೊಡ್ಡಾವರಹಳ್ಳಿ ಬಳಿ ಬೆಂಗಳೂರು ಮೂಲದ 81 ವರ್ಷದ ಕರೀಂಖಾನ್ ಅಡಿಕೆ, ಬಾಳೆ, ತೆಂಗಿನ ತೋಟವನ್ನು ಮಾಡಿಕೊಂಡಿದ್ದರು. ತೋಟದ ಮನೆಯ ಕಾವಲಿಗೆ ಅಂತ ಅಸ್ಸಾಂ ಮೂಲದ ಮೂವರು ಸೆಕ್ಯೂರಿಟಿ ಗಾರ್ಡ್ ಗಳನ್ನು ನೇಮಕ ಮಾಡಿದ್ದರು. 
ಮೇ 3ರಂದು ತೋಟಕ್ಕೆ ಕರೀಂಖಾನ್ ಬಂದಿದ್ದಾರೆ. ಈ ವೇಳೆ ಮೂವರು ಸೆಕ್ಯೂರಿಟಿ ಗಾರ್ಡ್ ಗಳು ಅವರ ಕೈ ಕಾಲು ಕಟ್ಟಿ ತೋಟದಲ್ಲಿನ ಶೆಡ್ ನಲ್ಲಿ ಕೂಡಿ ಹಾಕಿದ್ದಾರೆ. ನಂತರ ಕರೀಂಖಾನ್ ಮಗ ಆಯೂಬ್ ಖಾನ್ ಬಳಿ ಅಪರಿಚಿತರಂತೆ ನಮ್ಮ ತಂದೆಯನ್ನು ಕಿಡ್ನಾಪ್ ಮಾಡಿದ್ದು 70 ಲಕ್ಷ ರುಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. 
ಕೂಡಲೇ ಆಯೂಬ್ ಖಾನ್ ಗೌರಿಬಿದನೂರು ಪೊಲೀಸರಿಗೆ ದೂರು ನೀಡಿದ್ದು ಈ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ಸೆಕ್ಯೂರಿಟಿ ಗಾರ್ಡ್ ಗಳೇ ಅಪಹರಣಕಾರರು ಎಂದು ತಿಳಿದಿದ್ದು ರೈಲಿನಲ್ಲಿ ಅಸ್ಸಾಂಗೆ ಪರಾರಿಯಾಗುತ್ತಿದ್ದ ಅಪಹರಣಕಾರರನ್ನು ಪೊಲೀಸರು ವಿಮಾನದಲ್ಲಿ ಕೊಲ್ಕತ್ತಾಗೆ ತೆರಳಿ ಹೌರಾ ರೈಲ್ವೆ ಜಂಕ್ಷನ್ ಬಳಿ ಬಂಧಿಸಿದ್ದಾರೆ. 
ವಿಚಾರಣೆ ವೇಳೆ ಆರೋಪಿಗಳು ಕರೀಖಾನ್ ರನ್ನು ಕೂಡಿ ಹಾಕಿದ್ದು ಅವರು ಅಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದರು. ಈ ವಿಷಯ ಪೊಲೀಸರಿಗೆ ತಿಳಿಯುವ ಮೊದಲೇ ಅಸ್ಸಾಂಗೆ ಪರಾರಿಯಾಗಬೇಕು ಎಂದು ಹೋಗುತ್ತಿದ್ದುದ್ದಾಗಿ ಒಪ್ಪಿಕೊಂಡಿದ್ದಾರೆ. 
ಬಂಧಿತ ಆರೋಪಿಗಳನ್ನು ಜಾಕೀರ್, ಮುತಾಬುದ್ದೀನ್, ನಸರುವುಲ್ಲಾ ಹುಸೇನ್ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT