ಸಂಗ್ರಹ ಚಿತ್ರ 
ರಾಜ್ಯ

ಆರ್​ಆರ್ ನಗರ ವೋಟರ್ ಐಡಿ ಪತ್ತೆ ಪ್ರಕರಣ: ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ರವಾನೆ

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಜಾಲಹಳ್ಳಿಯ ಅಪಾರ್ಟ್​ವೆುಂಟ್​ವೊಂದರಲ್ಲಿ ಪತ್ತೆಯಾದ 10 ಸಾವಿರ ಮತದಾರರ ಗುರುತಿನ ಚೀಟಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ತನ್ನ ವರದಿ ರವಾನೆ ಮಾಡಿದೆ.

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಜಾಲಹಳ್ಳಿಯ ಅಪಾರ್ಟ್​ವೆುಂಟ್​ವೊಂದರಲ್ಲಿ ಪತ್ತೆಯಾದ 10 ಸಾವಿರ ಮತದಾರರ ಗುರುತಿನ ಚೀಟಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ತನ್ನ ವರದಿ ರವಾನೆ ಮಾಡಿದೆ.
ಆರ್ ಆರ್ ನಗರದಲ್ಲಿ ಸಾವಿರಾರು ವೋಟರ್ ಐಡಿ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಚುನಾವಣೆ ನಡೆಯುವುದೋ ಇಲ್ಲವೋ ಎಂಬ ಆತಂಕ ಮನೆ ಮಾಡಿದ್ದು, ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ನಿರ್ಧಾರ ಕೈಗೊಳ್ಳಲಿದೆ. ಈ ನಡುವೆ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಕೆಸರೆರಚಾಟ ನಡೆದಿರುವಂತೆಯೇ, ಪ್ರಕರಣದ ಕುರಿತು ಉಪ ಆಯುಕ್ತರಿಂದ ತನಿಖೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.
ಏತನ್ಮಧ್ಯೆ ಪ್ರಕರಣದಲ್ಲಿ ಅಧಿಕಾರಿಗಳ ಪಾತ್ರವಿದೆ.  ಅಪಾರ್ಟ್​ವೆುಂಟ್​ನಲ್ಲಿ ಸಿಕ್ಕ 9,896 ಮತದಾರರ ಗುರುತಿನ ಚೀಟಿಗಳು ನಕಲಿ ಅಲ್ಲ. ಚುನಾವಣಾ ಆಯೋಗದ ಸಾಫ್ಟ್​ವೇರ್ ದುರ್ಬಳಕೆ ಮಾಡಿಕೊಂಡು ಈ ಗುರುತಿನ ಚೀಟಿ ತಯಾರಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯ ಚುನಾವಣಾ ಆಯೋಗದ ಮುಖ್ಯಾಧಿಕಾರಿ ಸಂಜೀವ್ ಕುಮಾರ್ ಅವರು, ಈ ಎಲ್ಲ ಆರೋಪಗಳು ನಿರಾಧಾರ. ಇದರಲ್ಲಿ ಅಧಿಕಾರಿಗಳ ಯಾವ ಪಾತ್ರವೂ ಕಂಡುಬಂದಿಲ್ಲ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಮೇಲ್ನೋಟಕ್ಕೆ ಕಂಡು ಬಂದ ಅಂಶ ಉಲ್ಲೇಖಿಸಿ ಸಿದ್ಧಪಡಿಸಲಾದ ವರದಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ಉಪ ಆಯುಕ್ತರು ಶೀಘ್ರ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಅಲ್ಲದೆ ಈ ಸಂಬಂಧ ಪೊಲೀಸ್, ವೆಚ್ಚ ಹಾಗೂ ಸಾಮಾನ್ಯ ವೀಕ್ಷಕರನ್ನು ಒಳಗೊಂಡ ಮೂವರು ಅಧಿಕಾರಿಗಳ ತಂಡ ತನಿಖೆ ಆರಂಭಿಸಿದ್ದು, ತನಿಖೆ ಪ್ರಗತಿಯಲ್ಲಿದೆ.  ಎಂದು ಸಂಜೀವ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT