ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಮತ ಚಲಾಯಿಸುತ್ತಿರುವ ಯುವ ಮತದಾರರು ಪ್ರತಿಜ್ಞೆ ಮಾಡುತ್ತಿರುವುದು 
ರಾಜ್ಯ

ಪೋಷಕರ ಆಯ್ಕೆಯಂತೆ ಮತ ಚಲಾಯಿಸಲಿದ್ದಾರೆ ಯುವ ಮತದಾರರು

ಮೇ.12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶೇ.3 ರಷ್ಟು ಯುವ ಮತದಾರರು ಮೊದಲ ಬಾರಿಗೆ ಮತ ಚಲಾಯಿಸುತ್ತಿದ್ದು, ಮತ ಚಲಾವಣೆಗೆ ಸಾಕಷ್ಟು ಉತ್ಸುಕರಾಗಿದ್ದಾರೆ...

ಬೆಂಗಳೂರು: ಮೇ.12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶೇ.3 ರಷ್ಟು ಯುವ ಮತದಾರರು ಮೊದಲ ಬಾರಿಗೆ ಮತ ಚಲಾಯಿಸುತ್ತಿದ್ದು, ಮತ ಚಲಾವಣೆಗೆ ಸಾಕಷ್ಟು ಉತ್ಸುಕರಾಗಿದ್ದಾರೆ. 
ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಮತದಾರರು ಕೆಲ ಗೊಂದಲಗಳಲ್ಲಿ ಸಿಲುಕಿದ್ದು, ಪೋಷಕರ ಆಯ್ಕೆಯಂತೆ ಮತ ಚಲಾಯಿಸುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
ರಾಜಕೀಯ ಹಾಗೂ ರಾಜಕೀಯ ಪಕ್ಷಗಳ ಬಗ್ಗೆ ಈ ವರೆಗೂ ತಲೆಕೆಡಿಸಿಕೊಳ್ಳದೇ ಇದ್ದರಿಂದಾಗಿ, ರಾಜಕೀಯ ಬಗ್ಗೆ ಸ್ವಲ್ಪ ಮಟ್ಟಿಗೆ ಜ್ಞಾನವನ್ನು ಹೊಂದಿರುವ ಯುವ ಮತದಾರರು ಪೋಷಕರು ಹೇಳಿದ ಪಕ್ಷಕ್ಕೆ ಮತಹಾಕುವುದಾಗಿ ತಿಳಿಸಿದ್ದಾರೆ. 
ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ದ್ವಿತೀಯ ಸೆಮಿಸ್ಟರ್ ಇಂಜಿನಿಯರಿಂಗ್ ವಿದ್ಯಾರ್ಥಿ ಯಶಸ್ವಿನಿ ನಂದೀಶ್ ಅವರು ಮಾತನಾಡಿ, ರಾಜಕೀಯದಲ್ಲಿ ನನಗೆ ಆಸಕ್ತಿಯಿಲ್ಲ. ಇದೇ ಮೊದಲ ಬಾರಿಗೆ ನಾನು ಮತ ಚಲಾಯಿಸುತ್ತಿದ್ದೇನೆ. ನನ್ನ ಪೋಷಕರು ಹೇಳಿದ ಪಕ್ಷ ಹಾಗೂ ಅಭ್ಯರ್ಥಿಗೆ ಮತ ಹಾಕುತ್ತೇನೆಂದು ಹೇಳಿದ್ದಾರೆ. 
ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಮತದಾರರ ಪ್ರತಿಕ್ರಿಯೆಗಳನ್ನು ಪಡೆಯಲು ಕೆಲ ಕಾಲೇಜುಗಳಿಗೆ ಭೇಟಿ ನೀಡಲಾಗಿತ್ತು. ಈ ವೇಳೆ ಹಲವು ವಿದ್ಯಾರ್ಥಿಗಳು ಪೋಷಕರ ಆಯ್ಕೆಯಂತೆಯೇ ಮತ ಚಲಾಯಿಸುವುದಾಗಿ ತಿಳಿಸಿದರು. 
ನಾವು ಮತ ಹಾಕುವುದರಿಂದ, ಹಾಕದೇ ಇರುವುದರಿಂದ ಯಾವುದೇ ವ್ಯತ್ಯಾಸಗಳಾಗುವುದಿಲ್ಲ. ನಾನು ನನ್ನ ವಿದ್ಯಾಭ್ಯಾಸದತ್ತ ಗಮನ ಹರಿಸುತ್ತಿದ್ದೇನೆ. ಪ್ರಸ್ತುತ ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ರಾಜಕೀಯ ಹಾಗೂ ಚುನಾವಣೆ ಬಗ್ಗೆ ತಿಳಿದುಕೊಳ್ಳಲು ನನಗೆ ಸಮಯಾವಾದರೂ ಎಲ್ಲಿದೆ? ಆದರೂ, ನಾನು ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿದ್ದೇನೆ. ಮೊದಲ ಬಾರಿಗೆ ಮತ ಚಲಾಯಿಸಲು ಬಹಳ ಉತ್ಸುಕನಾಗಿದ್ದೇನೆ. ಮತ ಚಲಾಯಿಸಲು ಪೋಷಕರ ಸಲಹೆಗಳನ್ನು ಪಡೆದುಕೊಳ್ಳುತ್ತೇನೆಂದು ಬೆಂಗಳೂರಿನ ಗ್ಲೋಬರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. 
ಇನ್ನು ಕೆಲ ಯುವ ಮತದಾರರಿಗೆ ತಮ್ಮ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿನಿಂತಿದ್ದಾರೆಂಬುದರ ಮಾಹಿತಿಯೇ ತಿಳಿದಿಲ್ಲ. ರಾಜ್ಯದ ಮುಖ್ಯಮಂತ್ರಿ ಹಾಗೂ ದೇಶದ ಪ್ರಧಾನಮಂತ್ರಿಯಷ್ಟೇ ನನಗೆ ಗೊತ್ತು ಎಂದು ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ಣಗೊಳಿಸಿ ಪದವಿಗೆ ಕಾಲಿಡುತ್ತಿರುವ ಮತ್ತೊಬ್ಬ ವಿದ್ಯಾರ್ಥಿ ಹೇಳಿದ್ದಾರೆ. 
ಬೆಂಗಳೂರು ಕೇಂದ್ರೀಯ ವಿಶ್ವವಿದ್ಯಾಲಯ ಉಪ ಕುಲಪತಿ ಪ್ರೊ.ಎಸ್.ಜಾಫೆಟ್ ಅವರು ಮಾತನಾಡಿ, ವಿದ್ಯಾರ್ಥಿಗಳ ಚುನಾವಣೆಗಳಿದ್ದಾಗ, ಯುವಕರಿಗೆ ರಾಜಕೀಯ ಬೆಳವಣಿಗೆಗಳ ಬಗ್ಗೆ ಅರಿವಿರುತ್ತದೆ. ಇಂದಿನ ಯುವಕರು ವಾಸ್ತವ ಜಗತ್ತಿನಲ್ಲಿ ಕಾರ್ಯನಿರತರಾಗಿದ್ದಾರೆಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT