ಹಲ್ಲೆ ಪ್ರಕರಣ: ನಲಪಾಡ್​ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ 
ರಾಜ್ಯ

ಹಲ್ಲೆ ಪ್ರಕರಣ: ನಲಪಾಡ್​ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿತನಾಗಿರುವ ಕಾಂಗ್ರೆಸ್ ನಾಯಕ ಎನ್.ಎ. ಹ್ಯಾರೀಸ್ ಪುತ್ರ ಮಹಮದ್ ನಲಪಾಡ್ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿತನಾಗಿರುವ ಕಾಂಗ್ರೆಸ್ ನಾಯಕ ಎನ್.ಎ. ಹ್ಯಾರೀಸ್ ಪುತ್ರ ಮಹಮದ್ ನಲಪಾಡ್ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.
ಪ್ರಕರಣ ಸಂಬಂಧ ಬಂಧಿತರಾಗಿದ್ದ ನಲಪಾಡ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮೇ 11ಕ್ಕೆ ಅಂತ್ಯವಾಗಿದ್ದು ಇಂದು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಆರೋಪಿಗಳನ್ನುದ್ದೇಶಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಮೇ 25ರವರೆಗೆ ನ್ಯಾಯ್ಂಗ ಬಂಧನ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ನಲಪಾಡ್ ಮತ್ತು ಸಹಚರರು ಇನ್ನೂ 14  ದಿನ ನ್ಯಾಯ್ಂಗ ಬಂಧನದಲ್ಲಿಯೇ ಇರಬೇಕುದೆ.
ಆರೋಪಿಗಳ ವಿರುದ್ಧ 60 ದಿನಗಳೊಳಗೆಆರೋಪಪಟ್ಟಿ ಸಲ್ಲಿಸಲು ಪೋಲೀಸರು ವಿಫಲವಾಗಿದ್ದ ಕಾರಣ ನ್ಯಾಯಾಲಯ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮೇ 11ರವರೆಗೆ ವಿಸ್ತರಣೆ ಂಆಡಿತ್ತು. ಏತನ್ಮಧ್ಯೆ ಪ್ರಕರಣ ಸಂಬಂಧ ಸಿಸಿಸ್ಬಿ ಪೋಲೀಸರು 600 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ.
ನಲಪಾಡ್ ಹಾಗೂ ಸಹಚರರು ಫೆ.17ರಂದು ಬೆಂಗಳೂರಿನ ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT