ರಾಜ್ಯ

ವಿಧಾನಸಭೆ ಚುನಾವಣೆ: ಮತಗಟ್ಟೆಯಲ್ಲೇ ಹೃದಯಾಘಾದಿಂದ ಇಬ್ಬರು ಸಾವು

Lingaraj Badiger
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಶನಿವಾರ ತಮ್ಮ ಹಕ್ಕು ಚಲಾಯಿಸಲು ಹೋಗಿದ್ದ ಇಬ್ಬರು ಮತದಾರರು ಮತಗಟ್ಟೆಯಲ್ಲೇ ಹೃದಯಾಘಾತದಿಂದ ನಿಧನರಾಗಿರುವ ದಾರುಣ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 70 ವರ್ಷದ ಅಣ್ಣಿ ಆಚಾರ್ಯ ಎಂಬುವವರು ಮತ ಹಾಕಿ ವಾಪಸು ತೆರಳುವ ವೇಳೆ ಮತಗಟ್ಟೆಯಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ದಾರಿ ಮಧ್ಯಯೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. 
ಇನ್ನು ಪಾಂಡವಪುರ ವಿಧಾನಸಭಾ ಕ್ಷೇತ್ರದ ವಡ್ಡರಹಳ್ಳಿ ಮತಗಟ್ಟಿಯಲ್ಲಿ 55 ವರ್ಷದ ತಮ್ಮೇಗೌಡ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
SCROLL FOR NEXT