ಸಂಗ್ರಹ ಚಿತ್ರ 
ರಾಜ್ಯ

ಮತದಾನ ಮುಕ್ತಾಯದ ಬೆನ್ನಲ್ಲೇ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್

ವಿಧಾನಸಭೆ ಚುನಾವಣಾ ಫಲಿತಾಂಶ ನಾಳೆ ಘೋಷಣೆಯಾಗಲಿದ್ದು, ಅದಕ್ಕೂ ಮೊದಲೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್...

ಬೆಂಗಳೂರು: ಮೇ 12 ರಂದು ನಡೆದ ವಿಧಾನಸಭೆ ಚುನಾವಣಾ ಫಲಿತಾಂಶ ನಾಳೆ ಘೋಷಣೆಯಾಗಲಿದ್ದು, ಅದಕ್ಕೂ ಮೊದಲೇ ರಾಜ್ಯದ ಜನತೆಗೆ ವಿದ್ಯುತ್ ಬೆಲೆ ಏರಿಕೆ ಶಾಕ್ ತಟ್ಟಿದೆ.
ಕರ್ನಾಟಕ ವಿದ್ಯುತ್ ನಿಗಮ ಮಂಡಳಿ ಮಂಡಳಿ ಇಂದು ತನ್ನ ನೂತನ ಪರಿಷ್ಕೃತ ವಿದ್ಯುತ್ ದರವನ್ನು ಘೋಷಣೆ ಮಾಡಿದ್ದು, ಅದರಂತೆ ವಿದ್ಯುತ್ ದರದಲ್ಲಿ ಶೇ.13 ರಿಂದ ಶೇ.26ರವರೆಗೂ ದರ ಏರಿಕೆಯಾಗಿದೆ.  ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ಅಧ್ಯಕ್ಷ ಶಂಕರ ಲಿಂಗೇಗೌಡ ಅವರು ದರ ಏರಿಕೆ ಕುರಿತು ಮಾಹಿತಿ ನೀಡಿದರು.
ಬೆಸ್ಕಾಂ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ದರದಲ್ಲಿ ಶೇ. 13ರಷ್ಚು ಹೆಚ್ಚಳವಾಗಿದ್ದು,  ಪರಿಷ್ಕೃತ ದರ ಪ್ರತೀ ಯೂನಿಟ್ ಗೆ 82 ಪೈಸೆ ಏರಿಕೆಯಾಗಿದೆ. ಅಂತೆಯೇ ಮೆಸ್ಕಾಂ ವ್ಯಾಪ್ತಿಯಲ್ಲಿ ಶೇ. 19ರಷ್ಚು ದರ ಹೆಚ್ಚಳವಾಗಿದ್ದು, ಪರಿಷ್ಕೃತ ದರ ಪ್ರತೀ ಯೂನಿಟ್ ಗೆ 1.23 ರೂ ಏರಿಕೆಯಾಗಿದೆ.
ಉಳಿದಂತೆ ಸೆಸ್ಕಾಂ ವ್ಯಾಪ್ತಿಯಲ್ಲಿ ಶೇ. 18ರಷ್ಟು ದರ ಏರಿಕೆಯಾಗಿದ್ದು, ಪರಿಷ್ಕೃತ ದರ ಪ್ರತೀ ಯೂನಿಟ್ ಗೆ 1.13 ರೂ ಏರಿಕೆಯಾಗದಿದೆ. ಹೆಸ್ಕಾಂ ವ್ಯಾಪ್ತಿಯಲ್ಲಿ ಶೇ. 19ರಷ್ಚು ದರ ಹೆಚ್ಚಳವಾಗಿದ್ದು, ಪರಿಷ್ಕೃತ ದರ ಪ್ರತೀ ಯೂನಿಟ್ ಗೆ 1.13 ರೂ ಏರಿಕೆಯಾಗಲಿದೆ. ಜೆಸ್ಕಾಂ ವ್ಯಾಪ್ತಿಯಲ್ಲಿ ಶೇ. 26ರಷ್ಟ ದರ ಹೆಚ್ಚಳವಾಗಿದ್ದು, ಪರಿಷ್ಕೃತ ದರ ಪ್ರತೀ ಯೂನಿಟ್ ಗೆ 1.62 ರೂ ಏರಿಕೆಯಾಗಲಿದೆ. ಇನ್ನು ನೂತನ ದರಗಳು ಏಪ್ರಿಲ್ 1ರಿಂದಲೇ ಜಾರಿಗೆ ಬರಲಿವೆ ಎಂದು ಶಂಕರ ಲಿಂಗೇಗೌಡ ಅವರು ಮಾಹಿತಿ ನೀಡಿದ್ದಾರೆ.
ಪ್ರತೀ ವರ್ಷ ನವಂಬರ್ ನಲ್ಲೇ ವಿದ್ಯುತ್ ದರ ಪರಿಷ್ಕರಣೆಯಾಗುತ್ತಿತ್ತು. ಆದರೆ ಈ ಬಾರಿ ಚುನಾವಣೆ ಇದ್ದಿದ್ದರಿಂದ ದರ ಹೆಚ್ಚಳವಾಗಿರಲಿಲ್ಲ. ಆದರೆ ಇದೀಗ ಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ನಿಯಂತ್ರಣ ಮಂಡಳಿ ದರ ಏರಿಕೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT