ಸಂಗ್ರಹ ಚಿತ್ರ 
ರಾಜ್ಯ

ಖಾತೆ ತೆರೆದ ಪಕ್ಷೇತರರು; ಸವದತ್ತಿ ಯಲ್ಲಮ್ಮದಲ್ಲಿ ಆನಂದ್ ಚೋಪ್ರಾಗೆ ಮುನ್ನಡೆ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ರಾಜಕೀಯ ಪಕ್ಷಗಳ ಅಬ್ಬರದ ನಡುವೆಯೇ ಪಕ್ಷೇತರ ಅಭ್ಯರ್ಥಿಯೊಬ್ಬರು ಮುನ್ನಡೆ ಸಾಧಿಸಿದ್ದಾರೆ.

ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ರಾಜಕೀಯ ಪಕ್ಷಗಳ ಅಬ್ಬರದ ನಡುವೆಯೇ ಪಕ್ಷೇತರ ಅಭ್ಯರ್ಥಿಯೊಬ್ಬರು ಮುನ್ನಡೆ ಸಾಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಆನಂದ್ ಚೋಪ್ರಾ ಅವರು ಮುನ್ನಡೆ ಸಾಧಿಸಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ.  ಇನ್ನು ವಿಜಯಪುರದ ಬಬಲೇಶ್ವರ ಕ್ಷೇತ್ರದ ಎರೆಡನೇ ಸುತ್ತಿನ ಮತ ಎಣಿಕೆ ಮಕ್ತಾಯವಾಗಿದ್ದು, ಎರಡರಲ್ಲೂ ಕಾಂಗ್ರೆಸ್​ನ ಎಂ. ಬಿ. ಪಾಟೀಲಗೆ 2024 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಚಿತ್ರದುರ್ಗದ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹೊಳಲ್ಕೆರೆ ಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಹೊಸದುರ್ಗ ಕ್ಷೇತ್ರದಲ್ಲಿ ಬಿಜೆಪಿಯ ಗೂಳಿಹಟ್ಟಿ ಶೇಖರ್ ಅಲ್ಪ‌ಮುನ್ನಡೆ ಸಾಧಿಸಿದ್ದು, ಹೊಳಲ್ಕೆರೆಯ ಎಂ.ಚಂದ್ರಪ್ಪ ಮುನ್ನಡೆ ಸಾಧಿಸಿದ್ದಾರೆ. ಇದೇ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಂಜನೇಯ ಅವರು ಹಿನ್ನಡೆ ಅನುಭವಿಸಿದ್ದಾರೆ.
ಇತ್ತ ಕೊಳ್ಳೆಗಾಲದಲ್ಲಿ ಬಿಎಸ್ ಪಿ ಅಭ್ಯರ್ಥಿ ಮಹೇಶ್ ಅವರೂ ಕೂಡ ಮುನ್ನಡೆ ಸಾಧಿಸಿದ್ದಾರೆ. ಕೊಳ್ಳೆಗಾಲದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT