ಕಲಬುರಗಿಯಲ್ಲಿ ಭದ್ರತಾ ಸಿಬ್ಬಂದಿ 
ರಾಜ್ಯ

ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ, ಪೊಲೀಸ್ ಸಿಬ್ಬಂದಿ ನಿಯೋಜನೆ

ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನವಾದ ಮಂಗಳವಾರ ....

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನವಾದ ಮಂಗಳವಾರ ಕೇಂದ್ರ ಚುನಾವಣಾ ಆಯೋಗ ತೀವ್ರ ಭದ್ರತೆ ಕಲ್ಪಿಸಿದೆ.

ರಾಜ್ಯದ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತ ಎಣಿಕೆ ಕೇಂದ್ರಗಳಲ್ಲಿ ಕೇಂದ್ರ ಸೇನಾ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಸಾಕಷ್ಟು ಭದ್ರತಾ ಸಿಬ್ಬಂದಿಗಳು ಇರಲಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಒ.ಪಿ.ರಾವತ್ ತಿಳಿಸಿದ್ದಾರೆ.


ರಾಜ್ಯದ 38 ಮತ ಎಣಿಕೆ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು 50,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅವರಲ್ಲಿ 11,000 ಪೊಲೀಸ್ ಸಿಬ್ಬಂದಿಗಳು ಬೆಂಗಳೂರು ನಗರವೊಂದರಲ್ಲಿಯೇ ಇರುತ್ತಾರೆ.
ಒಂದು ಕ್ಷಿಪ್ರ ಕಾರ್ಯಪಡೆ ತುಕಡಿ ಮತ್ತು 20 ಕರ್ನಾಟಕ ರಾಜ್ಯ ಮೀಸಲು ಪಡೆ ತುಕಡಿಗಳನ್ನು ಬೆಂಗಳೂರಿನಲ್ಲಿ ನಿಯೋಜಿಸಲಾಗಿದೆ.



ಮತದಾನ ಪ್ರಕ್ರಿಯೆ ಸುಗಮವಾಗಿ ಸಾಗಿದಂತೆ ಇಂದು ಮತ ಎಣಿಕೆ ಕಾರ್ಯದಲ್ಲಿಯೂ ಯಾವುದೇ ಅಹಿತಕರ ಘಟನೆ, ಗಲಭೆ ನಡೆಯದಂತೆ ನೋಡಿಕೊಳ್ಳಲು ಚುನಾವಣಾ ಆಯೋಗ ಸಕಲ ಕ್ರಮ ಕೈಗೊಂಡಿದೆ.

ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಪಟಾಕಿ ಸಿಡಿಸಿ ಸಂಭ್ರಮಿಸುವುದು, ಇತರ ಸಂಭ್ರಮಾಚರಣೆಗಳು ಮತ್ತು ಮೆರವಣಿಗೆಗಳಿಗೆ ಪೊಲೀಸರು ನಿಷೇಧ ಹೇರಿದ್ದಾರೆ.
ಬೆಂಗಳೂರಿನ 5 ಮತ ಕೇಂದ್ರಗಳಲ್ಲಿ ಮೂರು ಪದರದ ವ್ಯವಸ್ಥೆಗಳನ್ನು ಮಾಡಲಾಗಿದೆ. ಇಲ್ಲಿನ ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT