ಕುಟುಂಬ ಸದಸ್ಯರೊಡನೆ ರೇಣುಕಾ 
ರಾಜ್ಯ

ಹಾಸನ: ಮನೆಬಿಟ್ಟು ನಾಪತ್ತೆಯಾಗಿದ್ದ ಬಾಲಕಿ ಏಳು ವರ್ಷದ ನಂತರ ಮರಳಿ ಗೂಡಿಗೆ!

ಬೇಲೂರು ತಾಲೂಕಿನ ದೇವಿಹಳ್ಳಿ ಗ್ರಾಮದಿಂದ ನಾಪತ್ತೆಯಾಗಿದ್ದ ಬಾಲಕಿಯನ್ನು ಏಳುವರ್ಷದ ನಂತರ ಅವರ ಕುಟುಂಬ ಪತ್ತೆ ಹಚ್ಚಿದೆ. ಹನುಮಂತ ಬೋವಿ ಪುತ್ರಿ ರೇಣುಕಾ 8 ನೇ ವಯಸ್ಸಿನಲ್ಲಿ ದೇವಿಹಳ್ಳಿಯಿಂದ ನಾಪತ್ತೆಯಾಗಿದ್ದರು.

ಹಾಸನ: ಬೇಲೂರು ತಾಲೂಕಿನ ದೇವಿಹಳ್ಳಿ ಗ್ರಾಮದಿಂದ ನಾಪತ್ತೆಯಾಗಿದ್ದ ಬಾಲಕಿಯನ್ನು ಏಳುವರ್ಷದ ನಂತರ ಅವರ ಕುಟುಂಬ ಪತ್ತೆ ಹಚ್ಚಿದೆ. ಹನುಮಂತ ಬೋವಿ ಪುತ್ರಿ ರೇಣುಕಾ 8 ನೇ ವಯಸ್ಸಿನಲ್ಲಿ  ದೇವಿಹಳ್ಳಿಯಿಂದ ನಾಪತ್ತೆಯಾಗಿದ್ದರು.

ಆಕೆಯ ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಹಾಸನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರಂತರವಾಗಿ ಹುಡುಕಾಟ ನಡೆಸಿ ಸುಸ್ತಾದ  ಕುಟುಂಬ ಸದಸ್ಯರು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ದೂರು ದಾಖಲಿಸಿದ್ದರು.

ನಾಪತ್ತೆಯಾಗಿರುವ ಮಕ್ಕಳ ಕಲ್ಯಾಣದಲ್ಲಿ ತೊಡಗಿಸಿಕೊಂಡಿರುವ  ಸಂಯೋಜಿತ ಬಾಲಕರ ರಕ್ಷಣಾ ಕೇಂದ್ರ ಸತತ ಪ್ರಯತ್ನದಿಂದ ಬಾಲಕಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ರೇಣುಕಾ ಮನೆಬಿಟ್ಟು ಬಂದ ನಂತರ ರೇಕಾ ಎಂಬ ಹೆಸರಿನಲ್ಲಿ ಮಂಡ್ಯ ಮಕ್ಕಳ ಕಲ್ಯಾಣ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಳು. ಮಂಡ್ಯದ ಸಮಿತಿಯ ಸದಸ್ಯರಿಗೆ ಸರಿಯಾದ ಮಾಹಿತಿಯನ್ನು ರೇಣುಕಾ ನೀಡಿರಲಿಲ್ಲ. ಇತ್ತೀಚಿಗೆ ಸಮಿತಿ ಆಕೆಯನ್ನು ವಿಚಾರಣೆ ನಡೆಸಿ ಜಿಲ್ಲಾ ಮಕ್ಕಳ ಕಲ್ಯಾಣ ನಿರ್ದೇಶನದ ಮೇರೆಗೆ ಆಕೆಯನ್ನು ಅವರ ಕುಟುಂಬ ಸದಸ್ಯರ ವಶಕ್ಕೆ ನೀಡಲಾಗಿದೆ.

ರೇಣುಕಾ 14 ವರ್ಷ ದಾಟಿದ ನಂತರ ಮಂಡ್ಯ ಮಕ್ಕಳ ಕಲ್ಯಾಣ ಸಮಿತಿ ಆ ಬಾಲಕಿಯನ್ನು ಮೈಸೂರು ಕೇಂದ್ರಕ್ಕೆ ಸೇರಿಸಲಾಗಿತ್ತು, ಆಕೆ ಮರಳಿ ಮನೆಗೆ ಬರುತ್ತಾಳೆ ಎಂಬ ನಂಬಿಕೆ ಇರಲಿಲ್ಲ, ಸಂಪರ್ಕ ಹಾಗೂ ಜ್ಞಾನದ ಕೊರತೆಯಿಂದಾಗಿ ಆಕೆಯನ್ನು ಸಂಪರ್ಕಿಸಲು ಆಗಿರಲಿಲ್ಲ ಎಂದು ರೇಣುಕಾ ತಂದೆ  ಹನುಮಂತಪ್ಪ ಹೇಳಿದ್ದಾರೆ.

ಆಕೆಯ ಪೋಷಕರಿಗೆ ಸರಿಯಾದ ಮಾಹಿತಿ ಇಲ್ಲದಿದ್ದರಿಂದ ಏಳು ವರ್ಷಗಳಿಂದ ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಹೆಸರು ಕೂಡಾ ಬದಲಾಗಿದ್ದರಿಂದ ಆಕೆಯನ್ನು ಪತ್ತೆ ಹಚ್ಚಲು ಪ್ರಮುಖ ತೊಡಕಾಗಿತ್ತು ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕೋಮಲಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT