ಸಾಂದರ್ಭಿಕ ಚಿತ್ರ 
ರಾಜ್ಯ

ಘನ ತ್ಯಾಜ್ಯ ನಿರ್ವಹಣೆಯಲ್ಲಿ ಮಂಗಳೂರಿಗೆ ದೇಶದಲ್ಲಿ ಉತ್ತಮ ನಗರ ಸ್ಥಾನ

ಮೂರರಿಂದ ಹತ್ತು ಲಕ್ಷದವರೆಗೆ ಜನವಸತಿ ಇರುವ ನಗರ ಪ್ರದೇಶಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ...

ಮಂಗಳೂರು; ಮೂರರಿಂದ ಹತ್ತು ಲಕ್ಷದವರೆಗೆ ಜನವಸತಿ ಇರುವ ನಗರ ಪ್ರದೇಶಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ಮಂಗಳೂರು ಭಾರತದಲ್ಲಿ ಅತ್ಯುತ್ತಮ ನಗರ ಎಂದು ಕೇಂದ್ರ ನಗರಾಭಿವೃದ್ದಿ ಮತ್ತು ವಸತಿ ಸಚಿವಾಲಯ ಘೋಷಿಸಿದೆ.

ಸ್ವಚ್ಛ ಭಾರತ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳ ಅಭಿಯಾನದಡಿಯಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ಸಮರ್ಥನೀಯತೆ, ನಾವೀನ್ಯತೆ ಮತ್ತು ಅದರಿಂದ ಹೊರಬಂದ ಫಲಿತಾಂಶಗಳನ್ನು ನೋಡಿಕೊಂಡು ಮಂಗಳೂರು ನಗರಕ್ಕೆ ಮೊದಲ ಸ್ಥಾನ ನೀಡಲಾಗಿದೆ. ಸ್ವಚ್ಛತಾ ಸರ್ವೇಕ್ಷಣಾ ಪ್ರಶಸ್ತಿಯ ಭಾಗವಾಗಿದ್ದು ದೇಶದ 4203 ನಗರ ಸ್ಥಳೀಯ ಸಂಸ್ಥೆಗಳನ್ನು ಮೌಲ್ಯಮಾಪನ ಮಾಡಲಾಗಿದೆ.

ಕಳೆದ ಜನವರಿ 4ರಿಂದ ಮಾರ್ಚ್ 10ರವರೆಗೆ ನಗರ ಪ್ರದೇಶಗಳ ಸ್ಥಳೀಯ ಸಂಸ್ಥೆಗಳ ಮೌಲ್ಯಮಾಪನ ಮಾಡಲಾಗಿದೆ. ನಗರದ ನಾಗರಿಕರ ಅಭಿಪ್ರಾಯ ಮತ್ತು ಸೇವಾ ಮಟ್ಟದಲ್ಲಿನ ಬೆಳವಣಿಗೆಗಳನ್ನು ನೋಡಲಾಗಿದೆ.

ಸಚಿವಾಲಯ ದೇಶದಲ್ಲಿ ಇಂದೋರ್, ಭೋಪಾಲ್ ಮತ್ತು ಚಂಡೀಗಢವನ್ನು ಮೂರು ಅತ್ಯಂತ ಹೆಚ್ಚಿನ ಸ್ವಚ್ಛ ನಗರಿ ಎಂದು ಗುರುತಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT