ಸಾಂದರ್ಭಿಕ ಚಿತ್ರ 
ರಾಜ್ಯ

ಘನ ತ್ಯಾಜ್ಯ ನಿರ್ವಹಣೆಯಲ್ಲಿ ಮಂಗಳೂರಿಗೆ ದೇಶದಲ್ಲಿ ಉತ್ತಮ ನಗರ ಸ್ಥಾನ

ಮೂರರಿಂದ ಹತ್ತು ಲಕ್ಷದವರೆಗೆ ಜನವಸತಿ ಇರುವ ನಗರ ಪ್ರದೇಶಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ...

ಮಂಗಳೂರು; ಮೂರರಿಂದ ಹತ್ತು ಲಕ್ಷದವರೆಗೆ ಜನವಸತಿ ಇರುವ ನಗರ ಪ್ರದೇಶಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ಮಂಗಳೂರು ಭಾರತದಲ್ಲಿ ಅತ್ಯುತ್ತಮ ನಗರ ಎಂದು ಕೇಂದ್ರ ನಗರಾಭಿವೃದ್ದಿ ಮತ್ತು ವಸತಿ ಸಚಿವಾಲಯ ಘೋಷಿಸಿದೆ.

ಸ್ವಚ್ಛ ಭಾರತ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳ ಅಭಿಯಾನದಡಿಯಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ಸಮರ್ಥನೀಯತೆ, ನಾವೀನ್ಯತೆ ಮತ್ತು ಅದರಿಂದ ಹೊರಬಂದ ಫಲಿತಾಂಶಗಳನ್ನು ನೋಡಿಕೊಂಡು ಮಂಗಳೂರು ನಗರಕ್ಕೆ ಮೊದಲ ಸ್ಥಾನ ನೀಡಲಾಗಿದೆ. ಸ್ವಚ್ಛತಾ ಸರ್ವೇಕ್ಷಣಾ ಪ್ರಶಸ್ತಿಯ ಭಾಗವಾಗಿದ್ದು ದೇಶದ 4203 ನಗರ ಸ್ಥಳೀಯ ಸಂಸ್ಥೆಗಳನ್ನು ಮೌಲ್ಯಮಾಪನ ಮಾಡಲಾಗಿದೆ.

ಕಳೆದ ಜನವರಿ 4ರಿಂದ ಮಾರ್ಚ್ 10ರವರೆಗೆ ನಗರ ಪ್ರದೇಶಗಳ ಸ್ಥಳೀಯ ಸಂಸ್ಥೆಗಳ ಮೌಲ್ಯಮಾಪನ ಮಾಡಲಾಗಿದೆ. ನಗರದ ನಾಗರಿಕರ ಅಭಿಪ್ರಾಯ ಮತ್ತು ಸೇವಾ ಮಟ್ಟದಲ್ಲಿನ ಬೆಳವಣಿಗೆಗಳನ್ನು ನೋಡಲಾಗಿದೆ.

ಸಚಿವಾಲಯ ದೇಶದಲ್ಲಿ ಇಂದೋರ್, ಭೋಪಾಲ್ ಮತ್ತು ಚಂಡೀಗಢವನ್ನು ಮೂರು ಅತ್ಯಂತ ಹೆಚ್ಚಿನ ಸ್ವಚ್ಛ ನಗರಿ ಎಂದು ಗುರುತಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT