ಸಾಂದರ್ಭಿಕ ಚಿತ್ರ 
ರಾಜ್ಯ

ಜೂನ್ 5ಕ್ಕೆ ರಾಜ್ಯಕ್ಕೆ ನೈರುತ್ಯ ಮುಂಗಾರು ಆಗಮನ: ಹವಾಮಾನ ಇಲಾಖೆ ವರದಿ

ಕೇರಳ ರಾಜ್ಯಕ್ಕೆ ಈ ತಿಂಗಳ 29ಕ್ಕೆ ನೈರುತ್ಯ ಮುಂಗಾರು ಪ್ರವೇಶವಾದರೆ ಕರ್ನಾಟಕದಲ್ಲಿ ಜೂನ್ ...

ಬೆಂಗಳೂರು: ಕೇರಳ ರಾಜ್ಯಕ್ಕೆ ಈ ತಿಂಗಳ 29ಕ್ಕೆ ನೈರುತ್ಯ ಮುಂಗಾರು ಪ್ರವೇಶವಾದರೆ ಕರ್ನಾಟಕದಲ್ಲಿ ಜೂನ್ 5ರಂದು ನೈರುತ್ಯ ಮುಂಗಾರು ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ವರ್ಷ ರಾಜ್ಯದಲ್ಲಿ ನೈರುತ್ಯ ಮುಂಗಾರು ಸಹಜವಾಗಿ ಸುರಿಯಲಿದೆ, ಕಳೆದ ವರ್ಷ ಕರಾವಳಿಯಲ್ಲಿ ನೈರುತ್ಯ ಮುಂಗಾರಿನ ಕೊರತೆ ಮತ್ತು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ತೀವ್ರವಾಗಿ ಕಾಣಿಸಿಕೊಂಡಿತ್ತು.

ಈ ವರ್ಷ ಸಾಕಷ್ಟು ಮಳೆ ಸುರಿಯುವುದರಿಂದ ರೈತರ ಮೊಗದಲ್ಲಿ ಸಂತಸ ಮೂಡಲಿದೆ. ಜೂನ್ ತಿಂಗಳಿನಿಂದ ಸೆಪ್ಟೆಂಬರ್ ವರೆಗೆ ಶೇಕಡಾ 97ರಷ್ಟು ಮಳೆ ಸುರಿಯಲಿದೆ ಎಂದು ಕೂಡ ಹವಾಮಾನ ಇಲಾಖೆ ತಿಳಿಸಿದೆ.

ಕಳೆದ 40 ವರ್ಷಗಳಲ್ಲಿ ರಾಜ್ಯಕ್ಕೆ ಜೂನ್ 5ರಂದು ಮುಂಗಾರು ಮಳೆ ಪ್ರವೇಶವಾಗುತ್ತಿತ್ತು. ಈ ವರ್ಷ ದಕ್ಷಿಣ ಒಳನಾಡಿಗೆ ನೈರುತ್ಯ ಮುಂಗಾರು ಸುರಿಯುವ ಸಾಧ್ಯತೆಯಿದೆ. ನಂತರ ಇಡೀ ರಾಜ್ಯಕ್ಕೆ ಪಸರಿಸಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT