ರಾಜ್ಯ

ಮುಸ್ಲಿಮರನ್ನು ಕರ್ನಾಟಕದ ಉಪ ಮುಖ್ಯಮಂತ್ರಿ ಮಾಡಬೇಕು; ಮುಸ್ಲಿಂ ಸಂಘಟನೆ

Manjula VN
ಬೆಂಗಳೂರು; ಮುಸ್ಲಿಮರನ್ನು ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿಸಬೇಕೆಂದು ಮುಸ್ಲಿಂ ಸಂಘಟನೆಗಳು ಮಂಗಳವಾರ ಆಗ್ರಹಿಸಿವೆ. 
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮುಸ್ಲಿಂ ಸಂಘಟನೆಗಳು, ಶಿವಾಜಿನಗರದಲ್ಲಿ ಕಾಂಗ್ರೆಸ್ ಖಾಸಕ ರೋಷನ್ ಬೇಗ್ ಅವರು 7 ಬಾರಿ ಜಯಭೇರಿ ಸಾಧಿಸಿದ್ದಾರೆ. ರೋಷನ್ ಬೇಗ್ ಅವರನ್ನು ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಮಾಡಬೇಕೆಂದು ಆಗ್ರಹಿಸಿವೆ. 
ಒಂದೇ ವೇಳೆ ರೋಷನ್ ಬೇಗ್ ಅವರನ್ನು ಮಾಡಲು ಸಾಧ್ಯವಾಗದೇ ಹೋದರೆ, ಮುಸ್ಲಿಂ ಸಮುದಾಯದ ಬೇರಾರನ್ನಾದರೂ ಉಪ ಮುಖ್ಯಮಂತ್ರಿ ಮಾಡಬೇಕೆಂದು ತಿಳಿಸಿದ್ದಾರೆ. 
ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಈ ಹಿನ್ನಲೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುವಂತಾಯಿತು. ಮೈತ್ರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅತೀ ದೊಡ್ಡ ಪಕ್ಷವಾಗಿ ನಿರ್ಮಾಣವಾಗಿದ್ದು, ಮೇ.23 ರಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಾರೆ. 
SCROLL FOR NEXT