ಸಂಗ್ರಹ ಚಿತ್ರ 
ರಾಜ್ಯ

ನಗರದ ಹಲವೆಡೆ ಭಾರೀ ಮಳೆ; ಹೆಚ್'ಡಿ. ಕುಮಾರಸ್ವಾಮಿ, ಪರಮೇಶ್ವರ್ ಪದಗ್ರಹಣಕ್ಕೆ ಅಡ್ಡಿ

ಹೆಚ್.ಡಿ.ಕುಮಾರಸ್ವಾಮಿ, ಪರಮೇಶ್ವರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂಭ್ರಮ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯದಲ್ಲಿ ಮನೆ ಮಾಡಿದ್ದು, ಈ ನಡುವಲ್ಲೇ ನಗರದಲ್ಲಿ ವರುಣನ ಆರ್ಭಟ ಜೋರಾಗಿದೆ...

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ, ಪರಮೇಶ್ವರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂಭ್ರಮ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯದಲ್ಲಿ ಮನೆ ಮಾಡಿದ್ದು, ಈ ನಡುವಲ್ಲೇ ನಗರದಲ್ಲಿ ವರುಣನ ಆರ್ಭಟ ಜೋರಾಗಿದೆ. 
ವಿಧಾನಸೌಧ ಸುತ್ತಮುತ್ತ ಸೇರಿದಂತೆ ಬೆಂಗಳೂರು ನಗರದಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿಧಾನಸೌಧಕ್ಕೆ ಬಳಿ ಜಮಾಯಿಸಿದ್ದ ಸಾವಿರಾರು ಜನರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. 
ಹಲವು ಮಂದಿ ಕುರ್ಚಿಗಳು, ಕಟೌಟ್ ಬ್ಯಾನರ್ ಗಳನ್ನು ಕೊಡೆಗಳನ್ನಾಗಿಸಿಕೊಂಡರೆ, ಇನ್ನು ಕೆಲವರು ಮಳೆಯಿಂದ ತಪ್ಪಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದರು. 
ಕೆಲವರು ಮಳೆಯಲ್ಲಿ ನೆನೆಯುತ್ತಲೇ ಇದ್ದರೆ, ಇನ್ನೂ ಕೆಲವರು ವಿಧಾನಸೌಧದ ಬಳಿಯಿರುವ ಮೆಟ್ರೋ ನಿಲ್ದಾಣದ ಬಳಿ ತೆರಳಿ ಆಶ್ರಯ ಪಡೆದರು. 
ಪದಗ್ರಹಣಕ್ಕೆ ಶಕ್ತಿಸೌಧದ ಆವರಣದಲ್ಲಿ ಮಾಡಲಾಗಿದ್ದ ಭರ್ಜರಿ ವೇದಿಕೆ ಮಳೆಯಿಂದಾಗಿ ತೊಯ್ದು ಹೋಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT