ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕೆಎಸ್ಆರ್'ಪಿ ಬಸ್ ಡಿಕ್ಕಿ; 2 ವರ್ಷದ ಮಗು ಸಾವು

ರಾಜ್ಯ ಮೀಸಲು ಪಡೆ (ಕೆಎಸ್'ಆರ್'ಪಿ) ಬಸ್ ಡಿಕ್ಕಿ ಹೊಡೆದು ಎರಡು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಆರ್'ಎಂಸಿ ಯಾರ್ಡ್'ನ ಆಶ್ರಯನಗರದಲ್ಲಿ ಬುಧವಾರ ನಡೆದಿದೆ...

ಬೆಂಗಳೂರು: ರಾಜ್ಯ ಮೀಸಲು ಪಡೆ (ಕೆಎಸ್'ಆರ್'ಪಿ) ಬಸ್ ಡಿಕ್ಕಿ ಹೊಡೆದು ಎರಡು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಆರ್'ಎಂಸಿ ಯಾರ್ಡ್'ನ ಆಶ್ರಯನಗರದಲ್ಲಿ ಬುಧವಾರ ನಡೆದಿದೆ. 
ಆಶ್ರಯನಗರದಲ್ಲಿ ನಿವಾಸಿಗಳಾದ ವಿಕ್ಟರಿ ವೇಲು ಮತ್ತು ಲತಾ ದಂಪತಿ ಪುತ್ರ ಗಿರಿ ಪ್ರಕಾಶ್ ಮೃತ ಬಾಲಕನಾಗಿದ್ದಾನೆ. ಘಟನೆ ಸಂಬಂಧ ಕೆಎಸ್ಆರ್'ಪಿ ಬಸ್ ಚಾಲಕನನ್ನು ಬಂಧನಕ್ಕೊಳಪಡಿಸಲಾಗಿದೆ. 
ವಿಕ್ಟರಿ ವೇಲು ಅವರು ಕೂಲಿ ಕಾರ್ಮಿಕರಾಗಿದ್ದು, ಕುಟುಂಬ ಸಮೇತ ಆಶ್ರಯನಗರದಲ್ಲಿ ನೆಲೆಸಿದ್ದಾರೆ. ಬಾಲಕ ಗಿರಿಪ್ರಕಾಶ್ ಬೆಳ್ಳಂಬೆಳಗ್ಗೆ ತಿಂಡಿ ಬೇಕು ಎಂದು ಅಳತೊಡಗಿದ್ದ. ಹೀಗಾಗಿ, ತಂದೆ ವಿಕ್ಟರಿ ವೇಲು ಅವರು ಪುತ್ರನನ್ನು ಎಥ್ತಿಕೊಂಡು ಮನೆ ಸಮೀಪದ ಅಂಗಡಿಗೆ ಹೋಗಿದ್ದರು. 
ತಿಂಡಿ ತೆಗೆದುಕೊಂಡು ಅಂಗಡಿಯವರಿಗೆ ಹಣ ನೀಡುವಷ್ಟರಲ್ಲಿ ಬಾಲಕ ಗಿರಿಪ್ರಕಾಶ್ ಒಬ್ಬನೇ ಮನೆ ಕಡೆಗೆ ಓಡಿ ಹೋಗಿದ್ದಾನೆ. ಈ ವೇಳೆ ರಸ್ತೆ ದಾಟುವಾಗ ಅಲ್ಲಿಯೇ ನಿಂತಿದ್ದ ಕೆಎಸ್ಆರ್'ಪಿ ಚಾಲಕ ಸಹ ವಾಹನ ಚಲಾಯಿಸಿದ್ದಾರೆ. ಇದರಿಂದ ಬಾಲಕನಿಗೆ ಬಸ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. 
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಕೆಎಸ್ಆರ್'ಪಿ ತುಕಟಿಯನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದ್ದು, ಬೆಳಿಗ್ಗೆ 5.30ರ ಸುಮಾರಿಗೆ ಸೋಲದೇನಹಳ್ಳಿ ಕಡೆ ತೆರಳಲು ಬಸ್ ಚಾಲಕ ಮುಂದಾಗಿದ್ದ. ಈ ವೇಳೆ ಅವಘಡ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT