ಸಂಗ್ರಹ ಚಿತ್ರ 
ರಾಜ್ಯ

ಚಾಮರಾಜಪೇಟೆ ಯುವಕನ ಹತ್ಯೆ: ವದಂತಿ ಹಬ್ಬಿಸಬೇಡಿ ಎಂದು ಡಿಸಿಪಿ ರವಿ ಡಿ ಚೆನ್ನಣ್ಣವರ್ ಮನವಿ

ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳತನ ಕುರಿತು ಸುಳ್ಳು ಸುದ್ದಿ ಅಥವಾ ವದಂತಿ ಹಬ್ಬಿಸಬೇಡಿ ಎಂದು ಡಿಸಿಪಿ ರವಿ ಡಿ ಚೆನ್ನಣ್ಣವರ್ ಹೇಳಿದ್ದಾರೆ.

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳತನ ಕುರಿತು ಸುಳ್ಳು ಸುದ್ದಿ ಅಥವಾ ವದಂತಿ ಹಬ್ಬಿಸಬೇಡಿ ಎಂದು ಡಿಸಿಪಿ ರವಿ ಡಿ ಚೆನ್ನಣ್ಣವರ್ ಹೇಳಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಕ್ಕಳ ಕಳ್ಳ ಎಂದು ಜನಸಮೂಹ ಯುವಕನ ಹತ್ಯೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ದಯವಿಟ್ಟು ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ವದಂತಿ ಹಬ್ಬಿಸಬೇಡಿ. ಇವೆಲ್ಲಾ ಸಾಕಷ್ಟು ವರ್ಷಗಳ ಹಿಂದೆ ನಡೆದಿದೆ. ಸುಳ್ಳು ಸುದ್ದಿಯನ್ನ ಹಬ್ಬಿಸುವವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಚೆನ್ನಣ್ಣವರ್ ಹೇಳಿದರು.

ಸುಳ್ಳು ಸುದ್ದಿ ಹಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆಯಲ್ಲಿ ಎರಡು ಹಾಗೂ ಉಪ್ಪಾರಪೇಟೆಯಲ್ಲಿ ಒಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಸುಳ್ಳು ಸುದ್ದಿಯನ್ನ ಹಬ್ಬಿಸೋರ ವಿರುದ್ಧ ಹಾಗೂ ವದಂತಿ ಹಬ್ಬಿಸೋರ ವರದಿ ವಿರುದ್ಧ ಕಾನುನೂ ಕ್ರಮ ಜರುಗಿಸಲಾಗುತ್ತದೆ, ದಯವಿಟ್ಟು ಈ ವದಂತಿ ನಂಬಬೇಡಿ, ಚಾಮರಾಜಪೇಟೆಯಲ್ಲಿ ನಡೆದದ್ದು ಸುಳ್ಳು. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಪೊಲೀಸರೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ರವಿ ಡಿ ಚೆನ್ನಣ್ಣನವರ್ ಸ್ಪಷ್ಟನೆ ನೀಡಿದರು. 

ಚಾಮರಾಜಪೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 14 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆಯಲ್ಲಿ ನಿರಪರಾಧಿಗಳೆಂದು ಸಾಬೀತಾದರೆ ಖಂಡಿತ ಬಿಟ್ಟು ಬಿಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT