ಸಂಗ್ರಹ ಚಿತ್ರ 
ರಾಜ್ಯ

ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ, ಸಚಿವ ಸಂಪುಚ ರಚನೆ ಮತ್ತಷ್ಟು ವಿಳಂಬ?

ಕಾಂಗ್ರೆಸ್-ಜೆಡಿಎಸ್ ಪಾಳಯದಲ್ಲಿ ಸಚಿವ ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಇದ್ದು, ಈ ಹಿನ್ನಲೆಯಲ್ಲಿ ಸಚಿವ ಸಂಪುಟ ರಚನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...

ಬೆಂಗಳೂರು; ಕಾಂಗ್ರೆಸ್-ಜೆಡಿಎಸ್ ಪಾಳಯದಲ್ಲಿ ಸಚಿವ ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಇದ್ದು, ಈ ಹಿನ್ನಲೆಯಲ್ಲಿ ಸಚಿವ ಸಂಪುಟ ರಚನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಇಂದು ಮಧ್ಯಾಹ್ನ ಆರಂಭವಾಗಲಿರುವ ವಿಧಾನಸಭೆಯ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಮೊದಲಿಗೆ ಸ್ಪೀಕರ್ ಆಯ್ಕೆ ನಡೆಯಲಿದೆ. ನಂತರ ಕುಮಾರಸ್ವಾಮಿ ತಮ್ಮ ಸರ್ಕಾರದ ಪರವಾಗಿ ವಿಶ್ವಾಸಮತಯಾಚನೆಯ ಪ್ರಸ್ತಾವನೆ ಮಂಡಿಸಲಿದ್ದಾರೆ. ಅಲ್ಲಿಗೆ ಸಮ್ಮಿಶ್ರ ಸರ್ಕಾರ ರಚನೆ ಪ್ರಮುಖ ಘಟ್ಟ ಮುಗಿದಂತಾಗುತ್ತದೆ. ನಂತರ ಇನ್ನೊಂದು ಪ್ರಮುಖ ಘಟ್ಟ ಆರಂಭವಾಗಲಿದೆ. 
ಉಭಯ ಪಕ್ಷಗಳ ನಡುವಿನ ಅಧಿಕಾರ ಹಂಚಿಕೆ ಸೂತ್ರದ ಅನುಸಾರ ಜೆಡಿಎಸ್'ಗೆ ಮುಖ್ಯಮಂತ್ರಿ ಸೇರಿ 12 ಸಚಿವ ಸ್ಥಾನ ಮತ್ತು ಕಾಂಗ್ರೆಸ್'ಗೆ ಉಪ ಮುಖ್ಯಮಂತ್ರಿ ಸೇರಿದಂತೆ 22 ಸಚಿವ ಸ್ಥಾನಗಳು ಲಭಿಸಲಿವೆ. 
ಕಾಂಗ್ರೆಸ್ ಪಾಳಯದಲ್ಲಿ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿಗಳು ಎದುರಾಗಿದ್ದು, ಈ ಹಿನ್ನಲೆಯಲ್ಲಿ ಯಾರಿಗೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಹೈಕಮಾಂಡ್ ನೊಂದಿಗೆ ಚರ್ಚೆನಡೆಸಲು ವಿಶ್ವಾಸಮತಯಾಚನೆ ಪೂರ್ಣಗೊಂಡ ಬಳಿಕ ಕಾಂಗ್ರೆಸ್ ನಾಯಕರು ಶುಕ್ರವಾ ರಾತ್ರಿ ಅಥವಾ ಶನಿವಾರ ಬೆಳಿಗ್ಗೆ ದೆಹಲಿಗೆ ತೆರಳುವ ಸಾಧ್ಯತೆಗಳಿವೆ ಎಂದು ಮೂಲಗಳು ಮಾಹಿತಿ ನೀಡಿವೆ. 
ಶನಿವಾರ ದೆಹಲಿಯಲ್ಲಿ ಗುಲಾಂ ನಬಿ ಆಜಾದ್, ವೇಣುಗೋಪಾಲ್ ಮೊದಲಾದ ನಾಯಕರ ಜೊತೆಗೆ ಚರ್ಚಿಸಿ ಸಂಪುಟ ಸೇರ್ಪಡೆಯಾಗಬೇಕಾದವರ ಪಟ್ಟಿ ಸಿದ್ಧಪಡಿಸಲಿದ್ದಾರೆ. ಅನಂತರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಈ ಪಟ್ಟಿಗೆ ಒಪ್ಪಿಗೆ ಪಡೆಯಲಿದ್ದಾರೆ. 
ವಾಸ್ತವವಾಗಿ ಕಾಂಗ್ರೆಸ್ ಹೈ ಕಮಾಂಡ್ ಸಂಪುಟ ಸೇರ್ಪಡೆ ವಿಚಾರವನ್ನು ರಾಜ್ಯ ಉಸ್ತುವಾರಿ ವೇಣಿ ಗೋಪಾಲ್ ಹಾಗೂ ರಾಜ್ಯ ನಾಯಕರೇ ತೀರ್ಮಾನಿಸುವಂತೆ ಸೂಚಿಸಿತ್ತು. ಆದರೆ, ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಿದ್ದಂತೆಯೇ ರಾಜ್ಯದ ಮಟ್ಟದಲ್ಲಿಯೇ ಸಚಿನ ಸ್ಥಾನಗಳನ್ನು ನಿರ್ಧರಿಸಿದರೆ, ಅಸಮಾಧಾನಕ್ಕೆ ಕಾರಣವಾಗಬಹುದು ಎಂಬ ಕಾರಣಕ್ಕೆ ರಾಜ್ಯ ನಾಯಕರು ದೆಹಲಿಗೆ ತೆರಳಲು ನಿರ್ಧರಿಸಿದ್ದಾರೆನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ