ಬೆಂಗಳೂರು: ರೋಡ್‌ ರೋಲರ್‌ ಹರಿದು ಬಾಲಕ ಸಾವು, ಬಿಬಿಎಂಪಿ ಇಂಜಿನಿಯರ್ ಅಮಾನತು 
ರಾಜ್ಯ

ಬೆಂಗಳೂರು: ರೋಡ್‌ ರೋಲರ್‌ ಹರಿದು ಬಾಲಕ ಸಾವು, ಬಿಬಿಎಂಪಿ ಇಂಜಿನಿಯರ್ ಅಮಾನತು

ರಸ್ತೆ ಕಾಮಗಾರಿ ವೇಳೆ ಬಳಸುವ ಜಲ್ಲಿ ಸಮ ಮಾಡುವ ಯಂತ್ರದಡಿಯಲ್ಲಿ ಸಿಕ್ಕು ಬಾಲಕನೊಬ್ಬ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ರಸ್ತೆ ಕಾಮಗಾರಿ ವೇಳೆ ಬಳಸುವ ಜಲ್ಲಿ ಸಮ ಮಾಡುವ ಯಂತ್ರದಡಿಯಲ್ಲಿ ಸಿಕ್ಕು ಬಾಲಕನೊಬ್ಬ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 
ಬೆಂಗಳೂರು ಹೆಮ್ಮಿಗೆಪುರ ವಾರ್ಡ್ 198 ರಸ್ತೆ ಕಾಮಗಾರಿ ವೇಳೆ ಬಳಸುವ ಯಂತ್ರಕ್ಕೆ ಸಿಕ್ಕು ಮನು (11) ದಾರುಣ ಸಾವನ್ನಪ್ಪಿದ್ದಾನೆ. ರಸ್ತೆಗೆ ಡಾಂಬರ್ ಹಾಕುವ ಕಾಮಗಾರಿ ನಡೆಯುತ್ತಿದ್ದಾಗ ಸೈಕಲ್ ತುಳಿದುಕೊಂಡು ಬರುತ್ತಿದ್ದ ಬಾಲಕನನ್ನು ಗಮನಿಸದ ಚಾಲಕ ಅವನ ಮೇಲೆಯೇ ಯಂತ್ರವನ್ನು ಚಲಾಯಿಸಿದ್ದಾನೆ.
ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸುಬ್ರಹ್ಮಣ್ಯ ಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಳಕಾಗಿದೆ.
ಇಂಜಿನಿಯರ್ ಅಮಾನತು
ಬಾಲಕನ ಸಾವಿಗೆ ಕಾರಣವಾದ ಕಾಮಗಾರಿ ಹೊಣೆ ಹೊತ್ತಿದ್ದ ಬಿಬಿಎಂಪಿ ಸಹಾಯಕ ಇಂಜಿನಿಯರ್  ದಯಾನಂದ್ ಅವರನ್ನು ಅಮಾನತುಪಡಿಸಲು ಮೇಯರ್ ಸಂಪತ್‍ರಾಜ್ ಸೂಚಿಸಿದ್ದಾರೆ. ಚಾಲಕನ ಅಜಾಗರೂಕತೆ ಈ ಘಟನೆಗೆ ಕಾರಣವಾಗಿದ್ದು ಮುಂದೆ ಇಂತಹಾ ಘಟನೆ ಮರುಕಳಿಸಿದರೆ ಅಧಿಕಾರಿಗಳನ್ನೇ ನೇರ ಹೊಣೆ ಮಾಡುವುದಾಗಿ ಅವರು ಹೇಳಿದ್ದಾರೆ.
ಮೃತ ಬಾಲಕನ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಮೇಯರ್ ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT