ಬೆಂಗಳೂರು: ರೋಡ್‌ ರೋಲರ್‌ ಹರಿದು ಬಾಲಕ ಸಾವು, ಬಿಬಿಎಂಪಿ ಇಂಜಿನಿಯರ್ ಅಮಾನತು 
ರಾಜ್ಯ

ಬೆಂಗಳೂರು: ರೋಡ್‌ ರೋಲರ್‌ ಹರಿದು ಬಾಲಕ ಸಾವು, ಬಿಬಿಎಂಪಿ ಇಂಜಿನಿಯರ್ ಅಮಾನತು

ರಸ್ತೆ ಕಾಮಗಾರಿ ವೇಳೆ ಬಳಸುವ ಜಲ್ಲಿ ಸಮ ಮಾಡುವ ಯಂತ್ರದಡಿಯಲ್ಲಿ ಸಿಕ್ಕು ಬಾಲಕನೊಬ್ಬ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ರಸ್ತೆ ಕಾಮಗಾರಿ ವೇಳೆ ಬಳಸುವ ಜಲ್ಲಿ ಸಮ ಮಾಡುವ ಯಂತ್ರದಡಿಯಲ್ಲಿ ಸಿಕ್ಕು ಬಾಲಕನೊಬ್ಬ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 
ಬೆಂಗಳೂರು ಹೆಮ್ಮಿಗೆಪುರ ವಾರ್ಡ್ 198 ರಸ್ತೆ ಕಾಮಗಾರಿ ವೇಳೆ ಬಳಸುವ ಯಂತ್ರಕ್ಕೆ ಸಿಕ್ಕು ಮನು (11) ದಾರುಣ ಸಾವನ್ನಪ್ಪಿದ್ದಾನೆ. ರಸ್ತೆಗೆ ಡಾಂಬರ್ ಹಾಕುವ ಕಾಮಗಾರಿ ನಡೆಯುತ್ತಿದ್ದಾಗ ಸೈಕಲ್ ತುಳಿದುಕೊಂಡು ಬರುತ್ತಿದ್ದ ಬಾಲಕನನ್ನು ಗಮನಿಸದ ಚಾಲಕ ಅವನ ಮೇಲೆಯೇ ಯಂತ್ರವನ್ನು ಚಲಾಯಿಸಿದ್ದಾನೆ.
ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸುಬ್ರಹ್ಮಣ್ಯ ಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಳಕಾಗಿದೆ.
ಇಂಜಿನಿಯರ್ ಅಮಾನತು
ಬಾಲಕನ ಸಾವಿಗೆ ಕಾರಣವಾದ ಕಾಮಗಾರಿ ಹೊಣೆ ಹೊತ್ತಿದ್ದ ಬಿಬಿಎಂಪಿ ಸಹಾಯಕ ಇಂಜಿನಿಯರ್  ದಯಾನಂದ್ ಅವರನ್ನು ಅಮಾನತುಪಡಿಸಲು ಮೇಯರ್ ಸಂಪತ್‍ರಾಜ್ ಸೂಚಿಸಿದ್ದಾರೆ. ಚಾಲಕನ ಅಜಾಗರೂಕತೆ ಈ ಘಟನೆಗೆ ಕಾರಣವಾಗಿದ್ದು ಮುಂದೆ ಇಂತಹಾ ಘಟನೆ ಮರುಕಳಿಸಿದರೆ ಅಧಿಕಾರಿಗಳನ್ನೇ ನೇರ ಹೊಣೆ ಮಾಡುವುದಾಗಿ ಅವರು ಹೇಳಿದ್ದಾರೆ.
ಮೃತ ಬಾಲಕನ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಮೇಯರ್ ಘೋಷಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ