ಮಾತೆ ಮಹಾದೇವಿ 
ರಾಜ್ಯ

ಲಿಂಗಾಯತ ಪ್ರತ್ಯೇಕ ಧರ್ಮ; ಸುಪ್ರೀಂ ಮೊರೆ ಹೋಗುತ್ತೇವೆ: ಮಾತೆ ಮಹಾದೇವಿ

ಕೇಂದ್ರ ಸರ್ಕಾರ ವೀರಶೈವ-ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡದೆ ಇದ್ದರೆ ತಾವು ಸುಪ್ರೀಂ ಕೋರ್ಟ್...

ಚಿತ್ರದುರ್ಗ: ಕೇಂದ್ರ ಸರ್ಕಾರ ವೀರಶೈವ-ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡದೆ ಇದ್ದರೆ ತಾವು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಬಸಧರ್ಮ ಪೀಠಾಧ್ಯಕ್ಷೆ  ಮಾತೆ ಮಹಾದೇವಿ ಅವರು ಭಾನುವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾತೆ ಮಹಾದೇವಿ, ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಮುಂದುವರಿಯುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ನಂತರ ದೆಹಲಿಯಲ್ಲಿ ಬೃಹತ್ ಜಾಥಾ ನಡೆಸುತ್ತೇವೆ ಎಂದರು.
ಈ ಮೊದಲು ಪ್ರತ್ಯೇಕ ಧರ್ಮ ಹೋರಾಟಕ್ಕೆ ಬಿಜೆಪಿ ವಿರೋಧಿಸಿತ್ತು. ಆದರೆ ಈಗ ಜನರ ಬೇಡಿಕೆ ಹೆಚ್ಚಾಗಿರುವ ಕಾರಣ ಬೇಡಿಕೆಗೆ ಸ್ಪಂದಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ಸಿಗುವ ವಿಶ್ವಾಸವಿದೆ ಎಂದರು.
ಇದೇ ವೇಳೆ, ಜೆಡಿಎಸ್- ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಅಗತ್ಯವಿದೆ. ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸಾಗಿದೆ. ಮಧ್ಯ ವಯಸ್ಕರಾಗಿರುವ ಎಂ.ಬಿ.ಪಾಟೀಲ ಈ ಸ್ಥಾನಕ್ಕೆ ಸೂಕ್ತವಾಗಿದ್ದಾರೆ ಎಂದು ಮಾತೆ ಮಹಾದೇವಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT