ಬಿಎಸ್ ಯಡಿಯೂರಪ್ಪ 
ರಾಜ್ಯ

ಕುಮಾರಸ್ವಾಮಿ ಸಿಎಂ ಆಗಿರುವುದು ಕನ್ನಡ ಜನರ ಸೇವೆಗೆ ಹೊರತು ಕಾಂಗ್ರೆಸ್ ಸೇವೆಗಾಗಿ ಅಲ್ಲ: ಬಿಎಸ್ ವೈ

"ಕುಮಾರಸ್ವಾಮಿ ಕನ್ನಡ ಜನತೆಯ ಕ್ಷಮೆ ಯಾಚಿಸಬೇಕು. ಅವರು ಕನ್ನಡ ನಾಡಿನ ಜನತೆ ಸೇವೆಗಾಗಿ ಸಿಎಂ ಆಗಿದ್ದಾರೆ ಹೊರತು ಕಾಂಗ್ರೆಸ್ ಸೇವೆಗಾಗಿ ಅಲ್ಲ ಎನ್ನುವುದನ್ನು ನಾನು ಅವರಿಗೆ ನೆನಪಿಸಲು ಬಯಸುತ್ತೇನೆ

ಬೆಂಗಳೂರು: "ಕುಮಾರಸ್ವಾಮಿ ಕನ್ನಡ ಜನತೆಯ ಕ್ಷಮೆ ಯಾಚಿಸಬೇಕು. ಅವರು ಕನ್ನಡ ನಾಡಿನ ಜನತೆ ಸೇವೆಗಾಗಿ ಸಿಎಂ ಆಗಿದ್ದಾರೆ ಹೊರತು ಕಾಂಗ್ರೆಸ್ ಸೇವೆಗಾಗಿ ಅಲ್ಲ ಎನ್ನುವುದನ್ನು ನಾನು ಅವರಿಗೆ ನೆನಪಿಸಲು ಬಯಸುತ್ತೇನೆ ಅವರು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಮುಖ್ಯಮಂತ್ರಿಯಾಗಿರಲು ಸಾಧ್ಯವಿಲ್ಲ" ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡ್ದ್ದ ರಾಜ್ಯ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು."ನಾನು ಕರ್ನಾಟಕದ ಜನರ ಮುಲಾಜಿನಲ್ಲಿಲ್ಲ, ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎನ್ನುವ ಅವರ ಹೇಳಿಕೆ ನಾಡಿನ ಜನತೆಗೆ ಮಾಡಿದ ಅಪಚಾರ. ಹೀಗಾಗಿ ಅವರು ಯಾವ ಮುಲಾಜು ಇಲ್ಲದೆ ಜನರ ಕ್ಷಮೆಯಾಚಿಸಲಿ. " ಎಂದರು.
"ರೈತರ ಸಾಲಮನ್ನಾಸಂಬಂಧ ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇದೀಗ ಅವರು ಸಾಲಮನ್ನಾಗೆ ಒಂದು ವಾರದ ಕಾಲಾವಧಿ ಕೇಳಿದ್ದಾರೆ.ಒಂದು ವಾರ ಕಾಯುತ್ತೇವೆ, ಬಳಿಕ ಮತ್ತೆ ಹೋರಾಟ ನಡೆಸಲಿದ್ದೇವೆ." ಎಂದು ಎಚ್ಚರಿಕೆ ನೀಡಿದ್ದಾರೆ.
ಇಂದು ಬೆಂಗಳೂರು ಹೊರತು ರಾಜ್ಯದೆಲ್ಲೆಡೆ ಬಂದ್ ಯಶಸ್ವಿಯಾಗಿದೆ. ಬಂದ್ ಗಾಗಿ ಯಾವ ಸಂಘಟನೆಗಳ ಬೆಂಬಲ ಕೋರಿರಲಿಲ್ಲ. ಸರ್ಕಾರ ಬಂದ್ ಮಾಡದೆ ಇರಲು ಪೋಲೀಸರನ್ನು ಬಳಸಿದೆ, ಬಿಜೆಪಿಯ ಸಂಸದರು, ಶಾಸಕರನ್ನು ಬಂಧಿಸಲಾಗಿದೆ. ಹಾಗಾದರೆ ಈ ರಾಜ್ಯದಲ್ಲಿ ಶಾಂತಿಯುತ ಪ್ರತಿಭಟನೆಗೂ ಅವಕಾಶವಿಲ್ಲದೆ ಹೋಗಿದೆಯೆ? ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT