ಬಿಎಸ್ ಯಡಿಯೂರಪ್ಪ 
ರಾಜ್ಯ

ಕುಮಾರಸ್ವಾಮಿ ಸಿಎಂ ಆಗಿರುವುದು ಕನ್ನಡ ಜನರ ಸೇವೆಗೆ ಹೊರತು ಕಾಂಗ್ರೆಸ್ ಸೇವೆಗಾಗಿ ಅಲ್ಲ: ಬಿಎಸ್ ವೈ

"ಕುಮಾರಸ್ವಾಮಿ ಕನ್ನಡ ಜನತೆಯ ಕ್ಷಮೆ ಯಾಚಿಸಬೇಕು. ಅವರು ಕನ್ನಡ ನಾಡಿನ ಜನತೆ ಸೇವೆಗಾಗಿ ಸಿಎಂ ಆಗಿದ್ದಾರೆ ಹೊರತು ಕಾಂಗ್ರೆಸ್ ಸೇವೆಗಾಗಿ ಅಲ್ಲ ಎನ್ನುವುದನ್ನು ನಾನು ಅವರಿಗೆ ನೆನಪಿಸಲು ಬಯಸುತ್ತೇನೆ

ಬೆಂಗಳೂರು: "ಕುಮಾರಸ್ವಾಮಿ ಕನ್ನಡ ಜನತೆಯ ಕ್ಷಮೆ ಯಾಚಿಸಬೇಕು. ಅವರು ಕನ್ನಡ ನಾಡಿನ ಜನತೆ ಸೇವೆಗಾಗಿ ಸಿಎಂ ಆಗಿದ್ದಾರೆ ಹೊರತು ಕಾಂಗ್ರೆಸ್ ಸೇವೆಗಾಗಿ ಅಲ್ಲ ಎನ್ನುವುದನ್ನು ನಾನು ಅವರಿಗೆ ನೆನಪಿಸಲು ಬಯಸುತ್ತೇನೆ ಅವರು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಮುಖ್ಯಮಂತ್ರಿಯಾಗಿರಲು ಸಾಧ್ಯವಿಲ್ಲ" ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡ್ದ್ದ ರಾಜ್ಯ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು."ನಾನು ಕರ್ನಾಟಕದ ಜನರ ಮುಲಾಜಿನಲ್ಲಿಲ್ಲ, ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎನ್ನುವ ಅವರ ಹೇಳಿಕೆ ನಾಡಿನ ಜನತೆಗೆ ಮಾಡಿದ ಅಪಚಾರ. ಹೀಗಾಗಿ ಅವರು ಯಾವ ಮುಲಾಜು ಇಲ್ಲದೆ ಜನರ ಕ್ಷಮೆಯಾಚಿಸಲಿ. " ಎಂದರು.
"ರೈತರ ಸಾಲಮನ್ನಾಸಂಬಂಧ ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇದೀಗ ಅವರು ಸಾಲಮನ್ನಾಗೆ ಒಂದು ವಾರದ ಕಾಲಾವಧಿ ಕೇಳಿದ್ದಾರೆ.ಒಂದು ವಾರ ಕಾಯುತ್ತೇವೆ, ಬಳಿಕ ಮತ್ತೆ ಹೋರಾಟ ನಡೆಸಲಿದ್ದೇವೆ." ಎಂದು ಎಚ್ಚರಿಕೆ ನೀಡಿದ್ದಾರೆ.
ಇಂದು ಬೆಂಗಳೂರು ಹೊರತು ರಾಜ್ಯದೆಲ್ಲೆಡೆ ಬಂದ್ ಯಶಸ್ವಿಯಾಗಿದೆ. ಬಂದ್ ಗಾಗಿ ಯಾವ ಸಂಘಟನೆಗಳ ಬೆಂಬಲ ಕೋರಿರಲಿಲ್ಲ. ಸರ್ಕಾರ ಬಂದ್ ಮಾಡದೆ ಇರಲು ಪೋಲೀಸರನ್ನು ಬಳಸಿದೆ, ಬಿಜೆಪಿಯ ಸಂಸದರು, ಶಾಸಕರನ್ನು ಬಂಧಿಸಲಾಗಿದೆ. ಹಾಗಾದರೆ ಈ ರಾಜ್ಯದಲ್ಲಿ ಶಾಂತಿಯುತ ಪ್ರತಿಭಟನೆಗೂ ಅವಕಾಶವಿಲ್ಲದೆ ಹೋಗಿದೆಯೆ? ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT