ಸಂಸದ ಡಿ. ಕೆ. ಸುರೇಶ್, ಕೈ ಅಭ್ಯರ್ಥಿ ಮುನಿರತ್ನ 
ರಾಜ್ಯ

ಕಾಂಗ್ರೆಸ್ ಮುಖಂಡನ ಮೇಲೆ ಐಟಿ ದಾಳಿ, ಇದು ಬಿಜೆಪಿಯ ಷಡ್ಯಂತ್ರ- ಕಾಂಗ್ರೆಸ್

ಮತದಾನಕ್ಕೂ ಒಂದು ದಿನ ಮುಂಚಿತವಾಗಿ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಮುಖಂಡರೊಬ್ಬರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಳು ದಾಳಿ ನಡೆಸಿದ್ದಾರೆ. ಆದರೆ, ದಾಳಿ ವೇಳೆ ಏನೂ ಸಿಕ್ಕಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

ಬೆಂಗಳೂರು : ಮತದಾನಕ್ಕೂ  ಒಂದು ದಿನ  ಮುಂಚಿತವಾಗಿ  ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಮುಖಂಡರೊಬ್ಬರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಳು ದಾಳಿ ನಡೆಸಿದ್ದಾರೆ. ಆದರೆ,  ದಾಳಿ ವೇಳೆ ಏನೂ ಸಿಕ್ಕಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

ಮತದಾರರಿಗೆ ಹಣ ಹಂಚಲಾಗುತ್ತಿದೆ ಎಂಬ ಆರೋಪದ ಮೇರೆಗೆ  ರಾಜರಾಜೇಶ್ವರಿ  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಗೌಡ  ಅವರ ಮನೆ ಮೇಲೆ  ದಾಳಿ ನಡೆಸಲಾಗಿದೆ. ಮುನಿರತ್ನ ಅವರ ಹೆಸರು ಕೆಡಿಸುವ ಸಲುವಾಗಿ  ಬಿಜೆಪಿ ನೀಡಿರುವ ತಪ್ಪು ಮಾಹಿತಿಯ  ಪರಿಣಾಮವಾಗಿ ಈ ದಾಳಿ ನಡೆದಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

 ಹಣ ಸಿಕ್ಕಿದ್ದರೆ  ನೋಟಿಸ್ ನೀಡಬೇಕು, ಬಿಜೆಪಿ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ  ಮತದಾರರ ಮೇಲೆ  ಪ್ರಭಾವ ಬೀರಲು ಯತ್ನಿಸುತ್ತಿದೆ ಎಂದು  ಬೆಂಗಳೂರು ಗ್ರಾಮಾಂತರ  ಲೋಕಸಭಾ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ಆರೋಪಿಸಿದರು.

 ರವಿಗೌಡ ಮನೆಯಿಂದ 5 ಕೋಟಿ ಹಣ ವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಿಜೆಪಿ ಸುಳ್ಳು ಆರೋಪ ಮಾಡಿದೆ. ಬಿಜೆಪಿ ಚುನಾವಣಾ ಆಯೋಗ ಹಾಗೂ ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಅವರು ಆಪಾದಿಸಿದರು.

ಈ ಮಧ್ಯೆ ಸುರೇಶ್ ತುರ್ತು ಸುದ್ದಿಗೋಷ್ಠಿ ನಡೆಸುವ ಮೂಲಕ  ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ  ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT