ಸಾಂದರ್ಭಿಕ ಚಿತ್ರ 
ರಾಜ್ಯ

ಆರ್ ಆರ್ ನಗರ ಚುನಾವಣೆ: ಬೆಳಿಗ್ಗೆ 11 ಗಂಟೆಯವರೆಗೂ ಶೇ.21 ರಷ್ಟು ಮತದಾನ

ಕಾಂಗ್ರೆಸ್ , ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಪ್ರಗತಿಯಲ್ಲಿದ್ದು, ಬೆಳಗ್ಗೆ 11 ಗಂಟೆಯವರೆಗೂ ಶೇ. 21 ರಷ್ಟು ಮತದಾನವಾಗಿರುವ ಬಗ್ಗೆ ವರದಿ ಬಂದಿದೆ.

ಬೆಂಗಳೂರು: ಕಾಂಗ್ರೆಸ್ , ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಪ್ರಗತಿಯಲ್ಲಿದ್ದು, ಬೆಳಗ್ಗೆ 11 ಗಂಟೆಯವರೆಗೂ ಶೇ. 21 ರಷ್ಟು ಮತದಾನವಾಗಿರುವ ಬಗ್ಗೆ ವರದಿ ಬಂದಿದೆ.

 ನಕಲಿ ಗುರುತಿನ ಚೀಟಿ ಹಗರಣದಿಂದಾಗಿ  ಮೇ 12 ರಂದು ನಡೆಯಬೇಕಾಗಿದ್ದ ಚುನಾವಣೆಯನ್ನು ಇಂದಿಗೆ ಮುಂದೂಡಲಾಗಿತ್ತು.  ಜಾಲಹಳ್ಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ  9.746 ನಕಲಿ ಮತದಾರರ ಚೀಟಿಗಳನ್ನು ಮೇ 8 ರಂದು ಚುನಾವಣಾ ಆಯೋಗ ಪತ್ತೆ ಮಾಡಿತ್ತು.

 ಈ ನಕಲಿ ಗುರುತಿನ ಚೀಟಿಗಳು ಪತ್ತೆಯಾದ ನಂತರ  ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಆರೋಪ, ಪ್ರತ್ಯಾರೋಪ ಉಂಟಾಗಿ, ಚುನಾವಣಾ ಆಯೋಗ  ಇಂದಿಗೆ ಚುನಾವಣೆಯನ್ನು ಮುಂದೂಡಿತ್ತು. ಶನಿವಾರ ಚುನಾವಣಾ ಪ್ರಚಾರ ಅಂತ್ಯಗೊಂಡಿತ್ತು.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಇದ್ದರೂ ಉಭಯ ಪಕ್ಷಗಳ ನಡುವೆ ಚುನಾವಣೆ ಹೊಂದಾಣಿಕೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್  ಸ್ವತಂತ್ರವಾಗಿ ಚುನಾವಣೆ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ, ಮಳೆ ಮುನ್ಸೂಚನೆ ಇಲ್ಲ ಎಂದ IMD

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

SCROLL FOR NEXT