ಬೆಂಗಳೂರು: ರಾಜ್ಯದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಉದಯ್ ಹೊಳ್ಳ ಅವರನ್ನು ನೇಮಕ ಮಾಡಲಾಗಿದೆ.
ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ರಾಜ್ಯ ಸರ್ಕಾರ ಹಿರಿಯ ನ್ಯಾಯವಾದಿ ಉದಯ್ ಹೊಳ್ಳ ಅವರನ್ನು ನೂತನ ಅಡ್ವೋಕೇಟ್ ಜನರಲ್ ಆಗಿ ನೇಮಕ ಮಾಡಿದೆ.
ಉದಯ್ ಹೊಳ್ಳರನ್ನು ಎಜಿ ಆಗಿ ನೇಮಿಸಿ ರಾಜ್ಯಪಾಲರು ಇಂದು ಸಂಜೆ ಆದೇಶ ಹೊರಡಿಸಿದ್ದಾರೆ. ಮೇ 30 ರಂದು ಉದಯ್ ಹೊಳ್ಳ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ, ಜೆಡಿಎಸ್ – ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಜಿಯಾಗಿದ್ದ ಉದಯ್ ಹೊಳ್ಳ 2006 ರಿಂದ 2009 ರವರೆಗೂ ಅಡ್ವೋಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದರು.
ಉದಯ್ ಹೊಳ್ಳ, ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರಿನ ಮೂಲದವರಾಗಿದ್ದು, ಈ ಹಿಂದೆ, ಪ್ರಭುಲಿಂಗ ನಾವಡಗಿ ರಾಜ್ಯ ಎಜಿ ಆಗಿದ್ದರು. ಮಾಜಿ ಸಿಎಂ ಯಡಿಯೂರಪ್ಪ ಅವರಿಂದ ನೇಮಕಗೊಂಡಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos