ಸಂಗ್ರಹ ಚಿತ್ರ 
ರಾಜ್ಯ

ಸಾಲು ಮರದ ತಿಮ್ಮಕ್ಕ ಸಾವಿನ ವಂದತಿ ಹಬ್ಬಿಸಿದ್ದ ಆರೋಪಿ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಸಾಲುಮರದ ತಿಮ್ಮಕ್ಕನ ಸಾವಿನ ಸುದ್ದಿ ಹಬ್ಬಿಸಿದ್ದ ಆರೋಪಿಯನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ  ಸಾಲುಮರದ ತಿಮ್ಮಕ್ಕನ ಸಾವಿನ ಸುದ್ದಿ ಹಬ್ಬಿಸಿದ್ದ ಆರೋಪಿಯನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆ ಸೇರಿದ್ದ ಸಾಲುಮರದ ತಿಮ್ಮಕ್ಕ ಸಾವನ್ನಪ್ಪಿದ್ದಾರೆ ಎಂದು ಸುಳ್ಳು ವದಂತಿ ಹಬ್ಬಿಸಿದ್ದ ಆರೋಪಿಯನ್ನು ಸೈಬರ್​ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೈಸೂರು ಮೂಲದ ಪ್ರದೀಪ್​ ಗೌಡ ಎಂದು ಗುರುತಿಸಲಾಗಿದ್ದು. ಈತ ಕೆ.ಆರ್.ನಗರದ ಹರದನಹಳ್ಳಿ ನಿವಾಸಿ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ವಾಸವಿದ್ದ ಪ್ರದೀಪ್​ಗೌಡ ವೋಲಾ ಕ್ಯಾಬ್​ ಡ್ರೈವರ್​. ಮೇ 25ರಂದು ಫೇಸ್​ಬುಕ್​ನಲ್ಲಿ ತಿಮ್ಮಕ್ಕನವರ ಫೋಟೋ ಎಡಿಟ್​ ಮಾಡಿ, ಸಾಲುಮರದ ತಿಮ್ಮಕ್ಕ ಇನ್ನಿಲ್ಲ ಎಂದು ಸ್ನೇಹಲೋಕ ಫೇಸ್ ಬುಕ್ ಗ್ರೂಪ್ ಗೆ ಅಪ್ ಲೋಡ್ ಮಾಡಿ ವಿಕೃತಿ ಮೆರೆದಿದ್ದ. ಬಳಿಕ ಸುದ್ದಿ ವ್ಯಾಪಕ ವೈರಲ್ ಆಗಿತ್ತು. ಈ ವಿಚಾರ ತಿಮ್ಮಕ್ಕನ ಸಾಕು ಮಗ ಉಮೇಶ್ ವನಸಿರಿ  ತಿಳಿದು ಅವರು ಸುದ್ದಿಗೋಷ್ಠಿ ನಡೆಸಿ ತಿಮ್ಮಕ್ಕ ಸತ್ತಿಲ್ಲ. ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದರು. ಮಾರನೆಯ ದಿನವೇ ತಿಮ್ಮಕ್ಕು ಮತ್ತು ಉಮೇಶ್ ವನಸಿರಿ  ಬೆಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಸುಳ್ಳು ವದಂತಿ ವಿರುದ್ಧ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಇದೀಗ ವದಂತಿ ಹಬ್ಬಿಸಿದ್ದ ಆರೋಪಿ ಪ್ರದೀಪ್ ಗೌಡನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT