ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ ಅರ್ಜಿದಾರರಿಗೆ 1 ಲಕ್ಷ ದಂಡ 
ರಾಜ್ಯ

ಬೆಂಗಳೂರು: ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ ಅರ್ಜಿದಾರರಿಗೆ ರು.1 ಲಕ್ಷ ದಂಡ

ಬಿಜೆಪಿ ಶಾಸಕ ಪ್ರಭು ಚೌಹಾಣ್ ಜಾತಿ ಪ್ರಮಾಣಪತ್ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ಹಿಂಪಡೆದ ಬೀರದ್ ನಿವಾಸಿಯೊಬ್ಬರಿಗೆ ನ್ಯಾಯಾಲಯದ ಸಮಯ ಹಾಳು ಮಾಡಿದ್ದ....

ಬೆಂಗಳೂರು: ಬಿಜೆಪಿ ಶಾಸಕ ಪ್ರಭು ಚೌಹಾಣ್ ಜಾತಿ ಪ್ರಮಾಣಪತ್ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ಹಿಂಪಡೆದ ಬೀರದ್ ನಿವಾಸಿಯೊಬ್ಬರಿಗೆ ನ್ಯಾಯಾಲಯದ ಸಮಯ ಹಾಳು ಮಾಡಿದ್ದ ಕಾರಣ ಒಂದು ಲಕ್ಷ ರೂ. ದಂಡ ವಿಧಿಸಿದ ಅಪರೂಪದ ಘಟನೆ ನಡೆದಿದೆ. 
ಸಮಾಜ ಕಲ್ಯಾಣ ಇಲಾಖೆ ಕಮಿಷನರ್ ವಿಕಾಶ್ ಕುಮಾರ್ ವಿಕಾಶ್ ದಂಡ ವಿಧಿಸಿದ್ದು ಬೀದರ್ ನ ಔರಾದ್ ಶಾಸಕ ಪ್ರಭು ಚೌಹಾಣ್ ಜಾತಿ ಪ್ರಮಾಣಪತ್ರ ಸಂಬಂಧ ಬೀದರ್ ನಿವಾಸಿಯೊಬ್ಬರು ದಾವೆ ಹೂಡಿ ಕಲಾಪದ ಸಮಯ ವ್ಯರ್ಥ ಮಾಡಿದ್ದಾರೆಂದು ಆರೋಪಿಸಲಾಗಿದೆ. "ವಿಶೇಷ ಕೌನ್ಸಿಲ್ ಗಮನಿಸುವಂತೆ  2018 ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಜಿಲ್ಲೆ ಔರಾದ್ ನಿಂದ ಸ್ಪರ್ಧಿಸಿದ್ದ ಬಿಜೆಪೊಇ ಅಭ್ಯರ್ಥಿ ಪ್ರಭು ಅವರ ಜಾತಿಯ ಸಂಬಂಧ ಮನವಿ ಪತ್ರದಲ್ಲಿ ಗಂಭೀರ ವಿಚಾರಗಳಿದೆ.ಆದರೆ ಚುನಾವಣೆಗೆ ಮುನ್ನ ಅರ್ಜಿ ಸಲ್ಲಿಸಿದ್ದ ಬೀದರ್ ನಿವಾಸಿ ರಾವ್ ಇದೀಗ ಅರ್ಜಿ ಹಿಂಪಡೆಯಲು ಮುಂದಾಗಿದ್ದಾರೆ.
"ಈ ಮೂಲಕ ಅವರು ನ್ಯಾಯಾಲಯದ ಅಮೂಲ್ಯ ಸಮಯವನ್ನು ಮಾತ್ರವಲ್ಲ, ವಿಶೇಷ ಕೌನ್ಸಿಲ್, ಪ್ರಭು ಅವರ ಸಮಯವನ್ನೂ ವ್ಯರ್ಥಗೊಳಿಸಿದ್ದಾರೆ" ಮೇಲ್ಮನವಿ ಪ್ರಾಧಿಕಾರ ತನ್ನ ಆದೇಶದಲ್ಲಿ ತಿಳಿಸಿದೆ.ವಿಕಾಶ್  ಗಮನಿಸುವಂತೆ ಅರ್ಜಿದಾರ ರಾವ್ ನಡವಳಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ.ಆದ ಕಾರಣ ನ್ಯಾಯಾಲಯದ ಸಮಯ ವ್ಯರ್ಥಗೊಳಿಸಿದ ಅರ್ಜಿದಾರರಿಗೆ ಒಂದು ಲಕ್ಷ ದಂಡ ವಿಧಿಸಲಾಗಿದೆ. 
ಪ್ರಕರಣವೇನು?
ಪ್ರಭು ಚೌಹಾಣ್ ಸಲ್ಲಿಸಿದ ಎಸ್ಸಿ' ಜಾತಿ ಪ್ರಮಾಣಪತ್ರದ ನ್ಯಾಯಬದ್ಧತೆ ಮತ್ತು ಸಿಂಧುತ್ವವನ್ನು ಪ್ರಶ್ನಿಸಿ ಬೀದರ್ ನಿವಾಸಿ ಶಂಕರ್ ರಾವ್  ಜಾತಿ ಪರಿಶೀಲನಾ ಸಮಿತಿಯ ಅಧ್ಯಕ್ಷರೂ ಆಗಿದ್ದ ಬೀದರ್ ಉಪ ಕಮಿಷನರ್ ಅವರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ವಾದ ಆಲಿಸಿದ ಬಳಿಕ  2017 ರ ನವೆಂಬರ್ 20 ರಂದು ಆ ಅರ್ಜಿಯನ್ನು ವಜಾಗೊಳಿಸಲಾಗಿತ್ತು.  ಇಷ್ಟಕ್ಕೆ ಸುಮ್ಮನಾಗದ ರಾವ್ ಕರ್ನಾಟಕ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳ ಕಾಯ್ದೆಯಡಿಯಲ್ಲಿ ಕಮ್ಮಿಷನರ್ ಗೆ ಮತ್ತೆ ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT