Pandit Rajeev Taranath conferred Nadoja Award 
ರಾಜ್ಯ

ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ನಾಡೋಜ ಪ್ರಶಸ್ತಿ ಪ್ರಧಾನ

ಪ್ರತಿಭಾವಂತ ಸಂಗೀತಗಾರರನ್ನು ವಿಶ್ವ ವಿದ್ಯಾನಿಲಯಗಳು ಹುಟ್ಟು ಹಾಕುವಲ್ಲಿ ವಿಫಲವಾಗಿವೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್‌ ವಾದಕ...

ಮೈಸೂರು: ಪ್ರತಿಭಾವಂತ ಸಂಗೀತಗಾರರನ್ನು ವಿಶ್ವ ವಿದ್ಯಾನಿಲಯಗಳು ಹುಟ್ಟು ಹಾಕುವಲ್ಲಿ ವಿಫಲವಾಗಿವೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್‌ ವಾದಕ ಡಾ.ಪಂಡಿತ್‌ ರಾಜೀವ್‌ ತಾರಾನಾಥ್‌ ಬೇಸರ ವ್ಯಕ್ತ ಪಡಿಸಿದ್ದಾರೆ. 
ಸರಸ್ವತಿಪುರಂನ ತಮ್ಮ ನಿವಾಸದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಮಲ್ಲಿಕಾ ಎಸ್‌. ಘಂಟಿ ಅವರಿಂದ ನಾಡೋಜ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಹಂಪಿ ವಿಶ್ವವಿದ್ಯಾನಿಲಯದಿಂದ ಪ್ರಶಸ್ತಿ ಸಿಕ್ಕಿದ್ದಕ್ಕೆ ಸಂತೋಷವಾಗುತ್ತಿದೆ. ನಮ್ಮ ಊರಿನ ಮಂದಿ ಹಾರ ಹಾಕಿ, ವಿಗ್ರಹ ಕೊಟ್ಟು ಗೌರವಿಸಿರುವುದರಿಂದ ಹೆಚ್ಚು ಖುಷಿಯಾಗುತ್ತಿದೆ. ನಾನು ಇನ್ನೂ ಕೆಲವು ದಿನ ಬದುಕಿರುತ್ತೇನೆ. ಅಷ್ಟರ ಒಳಗೆ ಈ ಪ್ರಶಸ್ತಿಯಂತೆ ನಿಮ್ಮ ವಿವಿಯಿಂದ ನಾಡಿಗೆ ಒಬ್ಬ ಸಂಗೀತಗಾರರನ್ನು ಕೊಡಿ ಆಗ ನನಗೆ ಹೆಚ್ಚು ಸಂತೋಷವಾಗುತ್ತದೆ ಎಂದು ಹೇಳಿದರು. 
ವಿಶ್ವವಿದ್ಯಾನಿಲಯಗಳ ಸಂಗೀತ ವಿಭಾಗಗಳಿಂದ ಸಂಗೀತಗಾರರೆ ಬರುತ್ತಿಲ್ಲ. ವಿವಿಯಲ್ಲಿರುವ ಪ್ರಾಧ್ಯಾಪಕರು 2 ಲಕ್ಷ ವೇತನ ಪಡೆಯುತ್ತಿದ್ದಾರೆಯೇ ಹೊರತು ಪ್ರತಿಭಾವಂತರನ್ನು ಹುಟ್ಟುಹಾಕುತ್ತಿಲ್ಲ. ಸಂಗೀತಗಾರ ರವಿಶಂಕರ್‌, ಅಲಿ ಅಕ್ಬರ್‌ ಖಾನ್‌ ಸಾಹೇಬ್‌ ಸೇರಿದಂತೆ ಸಂಗೀತದ ದಿಗ್ಗಜರೆಲ್ಲರ ಸ್ಥಾನ ತುಂಬುವವರು ಯಾರು ಎಂಬ ಪ್ರಶ್ನೆ ಎದುರಾಗಿದೆ. ಹೀಗಾಗಿ ಪ್ರತಿಭಾವಂತ ಸಂಗೀತಗಾರರನ್ನು ಹುಟ್ಟುಹಾಕುವ ಜವಾಬ್ದಾರಿ ಹೊಂದಿರುವ ವಿಶ್ವವಿದ್ಯಾನಿಲಯಗಳು ಈ ನಿಟ್ಟಿನಲ್ಲಿ ಬದ್ಧತೆ ತೋರಬೇಕಿದೆ,'' ಎಂದರು. 
ನಾನು ಸಂಗೀತಗಾರ. ಸದಾ ನುಡಿಸುವ ಪ್ರಯತ್ನ ಮಾಡುತ್ತಿರುತ್ತೇನೆ. ನಮ್ಮಲ್ಲಿ ಸಂಗೀತವನ್ನು ಗುರುಮುಖಿ ವಿಧಾನದಿಂದ ಕಲಿಸುತ್ತೇವೆ. ಆದರೆ, ಇದೀಗ ಆ ಶಿಕ್ಷಣ ಕ್ರಮಕ್ಕೆ ಮಾನ್ಯತೆಯೇ ಇಲ್ಲವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT