ಬಿಜೆಪಿಯ ಅಭ್ಯರ್ಥಿಗಳು 
ರಾಜ್ಯ

ವಿಧಾನ ಪರಿಷತ್ ಚುನಾವಣೆಗೆ 11 ಮಂದಿ ನಾಮಪತ್ರ ಸಲ್ಲಿಕೆ, ಅವಿರೋಧ ಆಯ್ಕೆ

ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ 11 ಸ್ಥಾನಗಳಿಗೆ ಜೂನ್ 11 ರಂದು ನಡೆಯುವ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಿಂದ 11 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ 11ಸ್ಥಾನಗಳಿಗೆ ಜೂನ್ 11 ರಂದು ನಡೆಯುವ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಿಂದ 11 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಬಿಜೆಪಿಯಿಂದ ಐವರು, ಕಾಂಗ್ರೆಸ್ ನಿಂದ ನಾಲ್ಕು ಮಂದಿ, ಜೆಡಿಎಸ್ ನಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.  

ಬಿಜೆಪಿಯಿಂದ ರುದ್ರೇಗೌಡ, ತೇಜಸ್ವಿನಿಗೌಡ, ಕೆ.ಪಿ. ನಂಜುಂಡಿ, ರಘುನಾಥ್ ಮಲ್ ಕಾಪುರೆ , ಮತ್ತು ಎನ್, ರವಿಕುಮಾರ್ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಕಾಂಗ್ರೆಸ್ ಪಕ್ಷದಿಂದ  ಸಿ.ಎಂ. ಇಬ್ರಾಹೀಂ, ಕೆ. ಗೋವಿಂದರಾಜು, ಅರವಿಂದ ಅರಳಿ, ಮತ್ತು ಕೆ. ಹರೀಶ್ ಕುಮಾರ್ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ನಿಂದ  ಬಿ. ಎಂ. ಫಾರೂಖ್ ಮತ್ತು ಧರ್ಮೇಗೌಡ ನಾಮಪತ್ರ ಸಲ್ಲಿಸಿದರು.

ವಿಧಾನಪರಿಷತ್ತಿನ 11 ಸ್ಥಾನಗಳಿಗೆ 11 ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಂತರ ಇವರ ಅವಿರೋಧ ಆಯ್ಕೆ ಬಗ್ಗೆ ಪ್ರಕಟಣೆ ಹೊರಬೀಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ: ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

SCROLL FOR NEXT