ಸಂಗ್ರಹ ಚಿತ್ರ 
ರಾಜ್ಯ

ಮುಷ್ಕರ ನಡೆಸುವ ನೌಕರರಿಗೆ ಬಿಸಿ ಮುಟ್ಟಿಸಲು ಕೇಂದ್ರ ಮುಂದು; ಮೆಟ್ರೋ ಸೇವೆಗಳನ್ನು ಎಸ್ಮಾ ಅಡಿ ತರಲು ಚಿಂತನೆ?

ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸುವುದಾಗಿ ಪದೇ ಪದೇ ಬೆದರಿಕೆಯೊಡ್ಡುವ ನೌಕರರಿಗೆ ಬಿಸಿ ಮುಟ್ಟಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಮೆಟ್ರೋ ನೌಕರರಿಗೆ ಎಸ್ಮಾ ಕಾಯ್ದೆ ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ...

ಬೆಂಗಳೂರು: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸುವುದಾಗಿ ಪದೇ ಪದೇ ಬೆದರಿಕೆಯೊಡ್ಡುವ ನೌಕರರಿಗೆ ಬಿಸಿ ಮುಟ್ಟಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಮೆಟ್ರೋ ನೌಕರರಿಗೆ ಎಸ್ಮಾ ಕಾಯ್ದೆ ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. 
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಮ್ಮ ಮೆಟ್ರೋ ಸಿಬ್ಬಂದಿ ಜೂ.4 ರಿಂದ ಅನಿರ್ಧಿಷ್ಟಾವಧಿ ಕಾಲ ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಅಗತ್ಯ ಸೇವೆಗಳಡಿ ಮೇಟ್ರೋ ಸೇವೆ ಬರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುವ ಯಾವುದೇ ಸೇವೆಯನ್ನು ಎಸ್ಮಾ ಕಾಯ್ದೆಯಡಿಯಲ್ಲಿ ತರುವುದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಅವಕಾಶವಿದೆ. 
ಈ ಹಿನ್ನಲೆಯಲ್ಲಿ ಮೆಟ್ರೋ ನೌಕರರ ಪ್ರತಿಭಟನೆಯನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಸ್ಮಾ ಕಾಯ್ದೆಯನ್ನು ನೌಕರರ ಪ್ರತಿಭಟನೆ ವೇಳೆ ಜಾರಿಗೊಳಿಸಲು ಮುಂದಾಗಿವೆ. 
ಬಿಎಂಆರ್'ಸಿಎಲ್ ಎಂಡಿ ಮಹೇಂದ್ರ ಜೈನ್ ಅವರು ಮಾತನಾಡಿ, ಮೆಟ್ರೋ ಸೇವೆಯಲ್ಲಿ ಗುಣಮಟ್ಟವನ್ನು ಕಾಪಾಡಿಕೊಂಡು ಬರಲಾಗಿದೆ. ಮೆಟ್ರೋ ಸೇವೆಗಳನ್ನು ಅಗತ್ಯ ಸೇವೆಗಳ ವ್ಯಾಪ್ತಿಗೆ ತರಲುವ ಅಗತ್ಯವಿದೆ. ನಗರದ ಜೀವನದಲ್ಲಿ ಚಲನಶೀಲತೆ ಎಂಬುದು ಅತ್ಯಂತ ಮುಖ್ಯವಾದದ್ದು. ಇಂತಹ ಚಲನಶೀಲತೆಯನ್ನು ಪ್ರತಿಬಂಧಿಸುವ ಶಕ್ತಿಗಳನ್ನು ನಿಯಂತ್ರಸಬೇಕು ಎಂದು ಹೇಳಿದ್ದಾರೆ. 
ಎಸ್ಮಾ (ಅಗತ್ಯ ಸೇವೆ ನಿರ್ವಹಣೆ ಕಾಯ್ದೆ) ಎನ್ನುವುದು ಕೆಲವು ಸೇವೆಗಳ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಸ್ಥಾಪಿಸಲಾದ ಭಾರತದ ಸಂಸತ್ತಿನ ಒಂದು ಕಾರ್ಯವಾಗಿದೆ. ಸರ್ಕಾರ ನೌಕರರ ಮೇಲೆ ಅಂಕುಶ ಹಾಕುವ ಕಾಯ್ದೆ ಇದಾಗಿದ್ದು, 1968ರಲ್ಲಿ ಜಾರಿಗೆ ತರಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT