ರಾಜ್ಯ

63ನೇ ಕರ್ನಾಟಕ ರಾಜ್ಯೋತ್ಸವ: ಮುಖ್ಯಮಂತ್ರಿ ಶುಭಾಶಯ

Sumana Upadhyaya

ಬೆಂಗಳೂರು: ಕರ್ನಾಟಕ ರಾಜ್ಯ ಗುರುವಾರ 63ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಶುಭಾಶಯ ತಿಳಿಸಿದ್ದಾರೆ.

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಸಂಸ್ಕೃತಿ ನಮ್ಮದು. ಸರ್ವಜನಾಂಗದ ಶಾಂತಿಯ ತೋಟ ಎಂದು ರಾಷ್ಟ್ರಕವಿ ಕುವೆಂಪುರವರು ಹೇಳಿದಂತೆ ಶಾಂತಿ, ಸೌಹಾರ್ದತೆಯಿಂದ ನಾವು ಕನ್ನಡಿಗರೆಲ್ಲರೂ ಒಗ್ಗಟ್ಟಿನಿಂದ ಬಾಳಿ ಕನ್ನಡ ನಾಡು, ನುಡಿ, ಏಳಿಗೆಗಾಗಿ ಶ್ರಮಿಸೋಣ ಎಂದು ಆಶಿಸಿದರು.

SCROLL FOR NEXT