ಹಾಸನಾಂಬ ದೇವಾಲಯದಲ್ಲಿ ನೆರೆದ ಭಕ್ತರು(ಸಂಗ್ರಹ ಚಿತ್ರ) 
ರಾಜ್ಯ

ಹಾಸನಾಂಬ ಜಾತ್ರೆ ಇಂದು ಆರಂಭ

ಜಿಲ್ಲೆಯ ಪ್ರಸಿದ್ಧ ಹಾಸನಾಂಬ ದೇಗುಲದ ಬಾಗಿಲು ಗುರುವಾರ ಮಧ್ಯಾಹ್ನ ತೆರೆಯಲಿದೆ...

ಹಾಸನ: ಜಿಲ್ಲೆಯ ಪ್ರಸಿದ್ಧ ಹಾಸನಾಂಬ ದೇಗುಲದ ಬಾಗಿಲು ಗುರುವಾರ ಮಧ್ಯಾಹ್ನ ತೆರೆಯಲಿದೆ.

ಇಂದಿನಿಂದ 9ರವರೆಗೆ ದೇಗುಲದ ಬಾಗಿಲು ತೆರೆದಿರುತ್ತಿದೆ. ಆದರೆ ಇಂದು ಮತ್ತು ಕಡೆಯ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ. ಉಳಿದ 7 ದಿನಗಳು ದೇವರಿಗೆ ನೈವೇದ್ಯ ನೀಡುವ ಸಮಯ ಹೊರತುಪಡಿಸಿ ದಿನದ 24 ಗಂಟೆಯೂ ಹಾಸನಾಂಬ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಆಶ್ವಿ‌ಜ ಮಾಸದ ಹುಣ್ಣಿಮೆಯ ನಂತರ ಬರುವ ಗುರುವಾರ ಬಾಗಿಲು ತೆರೆದು, ಬಲಿಪಾಡ್ಯಮಿಯ ಮರುದಿನ ಬಾಗಿಲು ಮುಚ್ಚುವ ಸಂಪ್ರದಾಯದಂತೆ ಇಂದು ಮಧ್ಯಾಹ್ನ ತೆರೆಯಲಾಗುತ್ತದೆ. ನ.9ರಂದು ದೇವಾಲಯದ ಬಾಗಿಲನ್ನು ಮುಚ್ಚಲಾಗುವುದು. ದೇವಿಯ ಗರ್ಭಗುಡಿಯ ಬಾಗಿಲು ತೆರೆಯುವ ಮುನ್ನ ದೇಗುಲದ ಆವರಣದಲ್ಲಿ ತಳವಾರ ಸಮುದಾಯದವರು ಸೇರುತ್ತಾರೆ.

ಅವರು ಗರ್ಭಗುಡಿಯ ಎದುರು ದೇಗುಲದ ಆವರಣದಲ್ಲಿ ಬನ್ನಿ ಮುಡಿದ ಬಾಳೆ ಕಂದು ನೆಡುತ್ತಾರೆ. ದೇವಾಲಯದ ಗರ್ಭಗುಡಿಯ ಬಾಗಿಲು ತೆಗೆಯುವ ಶುಭ ಮುಹೂರ್ತ ಆರಂಭವಾಗುವ ಕ್ಷಣದಲ್ಲಿ ತಳವಾರ ಸಮುದಾಯದ ನಂಜರಾಜೇ ಅರಸ್‌ ಅವರು ಬನ್ನಿ ಪತ್ರೆ ಮುಡಿದ ಬಾಳೆಕಂದನ್ನು ಕಡಿದುರುಳಿಸುತ್ತಾರೆ. ತಕ್ಷಣ ಮಂಗಳವಾದ್ಯಗಳ ಘೋಷದೊಂದಿಗೆ ದೇವಿಯ ಗರ್ಭಗುಡಿಯ ಬಾಗಿಲು ತೆರೆಯುತ್ತದೆ.

ಇದರೊಟ್ಟಿಗೆ ಜಾತ್ರಾ ಮಹೋತ್ಸವ ಆರಂಭವಾಗುತ್ತದೆ. ವರ್ಷಕ್ಕೊಮ್ಮೆ ಮಾತ್ರ ದೇವಾಲಯದ ಬಾಗಿಲು ತೆರೆಯುವುದು ಇಲ್ಲಿನ ವಿಶೇಷ. ಬಾಗಿಲು ಮುಚ್ಚುವಾಗ ಹಚ್ಚಿದ ಹಣತೆ ಮುಂದಿನ ವರ್ಷ ಬಾಗಿಲು ತೆರೆಯುವವರೆಗೂ ಉರಿಯುತ್ತಿರುತ್ತದೆ. ದೇವರಿಗೆ ಮುಡಿಸಿದ್ದ ಹೂವು ಬಾಡದೆ ಹೊಸತಾಗಿರುತ್ತದೆ. ನೈವೇದ್ಯ ಹಳಸದೆ ವರ್ಷ ಪೂರ್ತಿ ಹಸನಾಗಿರುತ್ತದೆ ಎಂಬ ವಿಶೇಷ ಈ ಹಾಸನಾಂಬೆ ದೇವಾಲಯದ್ದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

SCROLL FOR NEXT