ಅರ್ಜುನ್ ಸರ್ಜಾ, ಶ್ರುತಿ ಹರಿಹರನ್ 
ರಾಜ್ಯ

ಲೈಂಗಿಕ ಕಿರುಕುಳ ಪ್ರಕರಣ: ಅರ್ಜುನ್ ಸರ್ಜಾ ಬಂಧಿಸದಂತೆ ಹೈಕೋರ್ಟ್ ಆದೇಶ

ನಟಿ ಶ್ರುತಿ ಹರಿಹರನ್ ಅವರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ಅರ್ಜುನ್....

ಬೆಂಗಳೂರು: ನಟಿ ಶ್ರುತಿ ಹರಿಹರನ್ ಅವರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ಅರ್ಜುನ್ ಸರ್ಜಾ ಅವರನ್ನು ಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಪೊಲೀಸರಿಗೆ ಆದೇಶಿಸಿದೆ.
ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಅರ್ಜುನ್ ಸರ್ಜಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರು, ಮುಂದಿನ ವಿಚಾರಣೆಯವರೆಗೆ ಆರೋಪಿಯನ್ನು ಬಂಧಿಸಿದಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಶ್ರುತಿ ಹರಿಹರನ್ ಪರ ವಕೀಲ ಬಾಲನ್  ಹಾಗೂ ಅರ್ಜುನ್ ಸರ್ಜಾ ಪರ ವಕೀಲ ಬಿವಿ ಆಚಾರ್ಯ ಅವರ ವಿಸ್ತೃತ ವಾದ ಆಲಿಸಿದ ಹೈಕೋರ್ಟ್‌ನ ಏಕಸದಸ್ಯ ಪೀಠ, ಅರ್ಜಿಯ ವಿಚಾರಣೆಯನ್ನು ನವೆಂಬರ್ 14 ಕ್ಕೆ ಮುಂದೂಡಿದೆ.
ಮೂರು ವರ್ಷ ಕಾಲ ಹಳೆಯ ಪ್ರಕರಣ ಇದಾಗಿರುವ ಕಾರಣ ವಿಚಾರಣೆ ಮುಗಿಯುವವರೆಗೆ ಯಾರನ್ನೂ ಬಂಧಿಸಬಾರದು ಎಂದು ನ್ಯಾಯಾಲಯವು ಮಧ್ಯಂತರ ಆದೇಶ ನೀಡಿದೆ. ಆದರೆ ತನಿಖೆಗೆ ತಡೆ ನೀಡಲು ನಿರಾಕರಿಸಿದೆ. ಪ್ರಕರಣದಲ್ಲಿ ಯಾವುದೇ ತರಾತುರಿ ಬೇಡ ಎಂದು ಹೈಕೋರ್ಟ್‌ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT