ಕೆಪಿಎಸ್ ಸಿ ಕಚೇರಿ 
ರಾಜ್ಯ

ಬೆಂಗಳೂರು: ಕೆಪಿಎಸ್ ಸಿ ಕಚೇರಿಯಲ್ಲಿ ಸಹೋದ್ಯೋಗಿ ಮೇಲೆ ಮಚ್ಚಿನೇಟು!

ಕೆಪಿಎಸ್ ಸಿ ಕೇಂದ್ರ ಕಚೇರಿಯಲ್ಲಿ ಇಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಹಿರಿಯ ಸಹಾಯಕಿ ವಿಜಯಲಕ್ಷ್ಮಿ ಹಾಗೂ ನೌಕರ ರಾಮು ಎಂಬುವರ ಮೇಲೆ ಮತ್ತೋಬ್ಬ ಹಿರಿಯ ಸಹಾಯಕ ನಟರಾಜ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಬೆಂಗಳೂರು: ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ಪಕ್ಕದಲ್ಲಿಯೇ ಇರುವ  ಕೆಪಿಎಸ್ ಸಿ ಕೇಂದ್ರ ಕಚೇರಿಯಲ್ಲಿ ಇಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಹಿರಿಯ ಸಹಾಯಕಿ ವಿಜಯಲಕ್ಷ್ಮಿ ಹಾಗೂ ನೌಕರ ರಾಮು ಎಂಬುವರ ಮೇಲೆ ಮತ್ತೋಬ್ಬ ಹಿರಿಯ ಸಹಾಯಕ ನಟರಾಜ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ವಿಧಾನಸೌಧ ಪೊಲೀಸರು ನಟರಾಜನನ್ನು  ಬಂಧಿಸಿದ್ದಾರೆ.

ಇತ್ತೀಚಿಗೆ  ಪತ್ನಿಗೆ ವಿಚ್ಚೇದನ ನೀಡಿದ ನಟರಾಜ್  ಜಯಲಕ್ಷ್ಮಿ ಜೊತೆಗೆ ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದ. ಇದನ್ನೆ ನೆಪ ಮಾಡಿಕೊಂಡು ಪ್ರೀತಿಯನ್ನು ವ್ಯಕ್ತಪಡಿಸಿ ಮದುವೆಯಾಗುವಂತೆ ಪ್ರಸ್ತಾಪಿಸಿದ್ದಾನೆ. ಜಯಲಕ್ಷ್ಮಿಗೆ ಮದುವೆಯಾಗಿ, ಒಬ್ಬ ಪುತ್ರನಿದ್ದು, ಆತನೊಂದಿಗೆ ಸಂಬಂಧ ಹೊಂದಲು ಆಸಕ್ತಿ ಇಲ್ಲದೆ ಅಂತರ ಕಾಯ್ದುಕೊಂಡಿದ್ದರು .

 ಇದರಿಂದ ಆಕ್ರೋಶಗೊಂಡ ನಟರಾಜ್   ಇಂದು ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಜಯಲಕ್ಷ್ಮಿ ತಲೆಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಇದನ್ನು ತಡೆಯಲು ಬಂದ ರಾಮು ಎಂಬ ನೌಕರನ ಮೇಲೂ ಹಲ್ಲೆ ನಡೆಸಿದ್ದಾನೆ. ತಕ್ಷಣ ಸ್ಥಳಕ್ಕೆ ಧಾವಿಸಿರುವ ವಿಧಾನಸೌಧ ಪೊಲೀಸರು ಗಾಯಾಗಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಆರೋಪಿ ನಟರಾಜ್ ನನ್ನು ಬಂಧಿಸಿದ್ದಾರೆ.

ಗಾಯಾಳುಗಳು ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT