Will bypoll result ensure stability of government? 
ರಾಜ್ಯ

ಸಮ್ಮಿಶ್ರ ಸರ್ಕಾರದ ಸ್ಥಿರತೆಗೆ ಕಾರಣವಾಗುತ್ತಾ ಉಪಚುನಾವಣೆ?

ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾ ಉಪ ಚುನಾವಣೆ ಹಾಗೂ ಜಮಖಂಡಿ ರಾಮನಗರ ವಿಧಾನಸಭಾ ಉಪಚುನಾವಣೆ 2019 ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗುತ್ತಿದೆ.

ಬೆಂಗಳೂರು: ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾ ಉಪ ಚುನಾವಣೆ ಹಾಗೂ ಜಮಖಂಡಿ ರಾಮನಗರ ವಿಧಾನಸಭಾ ಉಪಚುನಾವಣೆ 2019 ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗುತ್ತಿದೆ. ಆದರೆ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎನ್ನುವುದಕ್ಕಿಂತ ಹೆಚ್ಚಾಗಿ ಈ ಉಪಚುನಾವಣೆಗಳು ಹೆಚ್ ಡಿ ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರದ ಸ್ಥಿರತೆಯನ್ನು ನಿರ್ಧರಿಸಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ. 
ಬಿಜೆಪಿ ಭದ್ರಕೋಟೆಯಾಗಿರುವ ಶಿವಮೊಗ್ಗದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಗೆದ್ದರೆ ಸಮ್ಮಿಶ್ರ ಸರ್ಕಾರ ಮತ್ತಷ್ಟು ಸ್ಥಿರವಾಗುವುದರ ಜೊತೆಗೆ ಶಿವಮೊಗ್ಗದಲ್ಲಿ ಜೆಡಿಎಸ್ ನ ನೆಲೆ ಭದ್ರಗೊಳ್ಳುವುದಕ್ಕೂ ಸಾಧ್ಯವಾಗಲಿದೆ.  ಈ ಕಾರಣಕ್ಕಾಗಿಯೆ ಹೆಚ್ ಡಿ ಕುಮಾರಸ್ವಾಮಿ ಸಹ ಕ್ಷೇತ್ರದಲ್ಲಿ ಹೆಚ್ಚಿನ ಪ್ರಚಾರ ಮಾಡಿದ್ದು, ಮಧು ಬಂಗಾರಪ್ಪ ಗೆದ್ದರೆ ಅದು ಯಡಿಯೂರಪ್ಪ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಅವರ ಗೆಲುವಾಗಿರಲಿದೆ ಎಂದು ಹೇಳಲಾಗುತ್ತಿದೆ.  ಇನ್ನು ಒಂದು ವೇಳೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಗೆದ್ದರೆ ಪಕ್ಷದಲ್ಲಿ ಈಗಾಗಲೇ ಪ್ರಶ್ನಾತೀತ ನಾಯಕರಾಗಿರುವ ಯಡಿಯೂರಪ್ಪ ಮತ್ತಷ್ಟು ಬಲಶಾಲಿಯಾಗುತ್ತಾರೆ.  ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗಿಂತಲೂ ಈ ಉಪಚುನಾವಣೆಗಳು ರಾಜ್ಯ ಸರ್ಕಾರದ ಸ್ಥಿರತೆ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT